Chikkamagaluru: ಭೂ ಒತ್ತುವರಿದಾರರಿಗೆ ರಿಲೀಫ್?  ಗುತ್ತಿಗೆ ಆಧಾರ ಭೂಮಿ ನೀಡಲು ಮುಂದಾದ ಸರ್ಕಾರ

Chikkamagaluru: ಭೂ ಒತ್ತುವರಿದಾರರಿಗೆ ರಿಲೀಫ್? ಗುತ್ತಿಗೆ ಆಧಾರ ಭೂಮಿ ನೀಡಲು ಮುಂದಾದ ಸರ್ಕಾರ

Published : Apr 29, 2022, 04:25 PM IST

ಚಿಕ್ಕಮಗಳೂರಿನಲ್ಲಿ (Chikkamagaluru) ಸುಮಾರು 11 ಸಾವಿರ ಹೆಕ್ಟೇರ್ಗೂ ಅಧಿಕ ಒತ್ತುವರಿಯಾಗಿದೆ ಎಂಬ ಮಾತಿದೆ. ಅದರಲ್ಲಿ ಬದುಕಿಗಾಗಿ ಮಾಡಿದ ಒತ್ತುವರಿಯಷ್ಟೆ (Land Encrochment) ಭೂಮಿ ಆಸೆಗೆ ಮಾಡಿದ್ದೂ ಇದೆ. ಹಾಗಾಗಿ, ಅರಣ್ಯ ಹಾಗೂ ಕಂದಾಯ ಇಲಾಖೆ ಹಲವು ಬಾರಿ ಒತ್ತುವರಿ ತೆರವಿಗೆ ಮುಂದಾದರೂ ಕೂಡ ಸಾಧ್ಯವಾಗಲಿಲ್ಲ.

ಚಿಕ್ಕಮಗಳೂರು (ಏ. 29): ಕಾಫಿನಾಡಿನಲ್ಲಿ ಹಲವು ದಶಕಗಳಿಂದ ಕಂದಾಯ ಭೂಮಿಯನ್ನ ಆಸೆ ಹಾಗೂ ಬದುಕಿಗಾಗಿ ಒತ್ತುವಾರಿ ಮಾಡಿದ್ದಾರೆ. ಅಕ್ರಮ ಒತ್ತುವರಿಯನ್ನ ಒಕ್ಕಲೆಬ್ಬಿಸೋ ಪ್ರಯತ್ನ ನಡೆಯಿತಾದ್ರು ಅಲ್ಲೊಂದು-ಇಲ್ಲೊಂದು ಬಿಟ್ರೆ ಸಮರ್ಪಕವಾಗಿ ಜಾರಿಯಾಗಿಲ್ಲ. ಹಾಗಾಗಿ, ಸರ್ಕಾರವೇ ಒತ್ತುವರಿದಾರರಿಗೆ ಗುಡ್ ನ್ಯೂಸ ಕೊಡಲು ಮುಂದಾಗಿದ್ದು, ದಶಕಗಳಿಂದ ಆತಂಕದಲ್ಲೇ ಬದುಕುತ್ತಿದ್ದ ಒತ್ತುವರಿದಾರರು ನಿಟ್ಟುಸಿರು ಬಿಟ್ಟಿದ್ದಾರೆ. 

ಸುಮಾರು 11 ಸಾವಿರ ಹೆಕ್ಟೇರ್ಗೂ ಅಧಿಕ ಒತ್ತುವರಿಯಾಗಿದೆ ಎಂಬ ಮಾತಿದೆ. ಅದರಲ್ಲಿ ಬದುಕಿಗಾಗಿ ಮಾಡಿದ ಒತ್ತುವರಿಯಷ್ಟೆ ಭೂಮಿ (land Encrochment) ಆಸೆಗೆ ಮಾಡಿದ್ದೂ ಇದೆ. ಹಾಗಾಗಿ, ಅರಣ್ಯ ಹಾಗೂ ಕಂದಾಯ ಇಲಾಖೆ (Revenue Department) ಹಲವು ಬಾರಿ ಒತ್ತುವರಿ ತೆರವಿಗೆ ಮುಂದಾದರೂ ಕೂಡ ಸಾಧ್ಯವಾಗಲಿಲ್ಲ. ಆದರೂ, ಒತ್ತುವರಿದಾರರು ನಾಳೆ-ನಾಡಿದ್ದು ನಮ್ಮ ಬದುಕು ಏನಾಗುತ್ತೋ ಎಂದು ಆತಂಕದಲ್ಲೆ ಬದುಕುತ್ತಿದ್ದರು. ಅದರಲ್ಲೂ ಕಾಫಿ ಬೆಳೆಯುವ ಮಲೆನಾಡು ಭಾಗದಲ್ಲೇ ಒತ್ತುವರಿ ಒಂದು ದೊಡ್ಡ ಸಮಸ್ಯೆಯಾಗಿತ್ತು.

ಆದ್ರೀಗ, ಕಂದಾಯ ಇಲಾಖೆ ಒತ್ತುವರಿಗೊಂದು ಫುಲ್ಸ್ಟಾಪ್ ಇಡೋದಕ್ಕೆ ಮುಂದಾಗಿರೋದು ಒತ್ತುವರಿದಾರರ ನಿರಾಳತೆಗೆ ಕಾರಣವಾಗಿದೆ. 10 ಎಕರೆಯೊಳಗಿನ ಜಮೀನನ್ನ ಒತ್ತುವರಿ ಮಾಡಿರುವ ರೈತರಿಗೆ ಅದೇ ಜಮೀನನ್ನ ಗುತ್ತಿಗೆ ಆಧಾರದಲ್ಲಿ ನೀಡುವ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ ಎನ್ನಲಾಗಿದ್ದು, ಒತ್ತುವರಿದಾರರು ನಿಟ್ಟುಸಿರು ಬಿಡುವಂತಾಗಿದೆ. ಕೇರಳ ಮಾದರಿಯಲ್ಲೇ ಎಕರೆಗೆ ವಾರ್ಷಿಕ 3 ಸಾವಿರ ಶುಲ್ಕ ವಿಧಿಸಲು ಮುಂದಾಗಿರೋದು ಸರ್ಕಾರದ ಬೊಕ್ಕಸಕ್ಕೂ ಲಾಭ ತರಲಿದೆ ಎಂದು ಹೇಳಲಾಗ್ತಿದೆ. 

ಚಿಕ್ಕಮಗಳೂರು 45 ಸಾವಿರ, ಹಾಸನ 25 ಸಾವಿರ ಹೆಕ್ಟೇರ್ ಹಾಗೂ ಕೊಡಗಿನಲ್ಲೂ ಕೂಡ ಕಂದಾಯ ಭೂಮಿಯನ್ನ ರೈತರು ಒತ್ತುವರಿ ಮಾಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ರಿಲೀಫ್ ಸಿಕ್ಕಿದಂತಾಗಿದೆ. ಆದರೆ, ಈ ಆಫರ್ ಅರಣ್ಯವನ್ನ ಒತ್ತುವರಿ ಮಾಡಿದವರಿಗೆ ಇಲ್ಲ. ಅರಣ್ಯ ಭೂಮಿಯನ್ನ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವವರ ಜಮೀನನ್ನ ತೆರವು ಮಾಡುವುದು ಅನಿವಾರ್ಯವಾಗಿದೆ. ಕಂದಾಯ ಭೂಮಿಯನ್ನ ಒತ್ತುವರಿ ಮಾಡಿದವರಿಗೆ ಲೀಸ್ ಸೌಲಭ್ಯ ಸಿಗಲಿದೆ. ಸರ್ಕಾರದ ಈ ಗುತ್ತಿಗೆ ಭೂಮಿ ಬಗ್ಗೆ ಜನನಾಯಕರು ಹೇಳಿಕೆ ಕೊಡ್ತಿದ್ದಾರೆ. ಆದರೆ, ಜಿಲ್ಲಾಧಿಕಾರಿ ಮಾತ್ರ ಈ ಬಗ್ಗೆ ಮಾಹಿತಿ ಬಿಟ್ಟುಕೊಡ್ತಿಲ್ಲ. ಈ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಿರಬಹುದು. ಸದ್ಯಕ್ಕೆ ನಮ್ಮ ಗಮನಕ್ಕೆ ಬಂದಿಲ್ಲ ಅಂತಾರೆ.

ಒಟ್ಟಾರೆ, ದಶಕಗಳಿಂದ ಒತ್ತುವರಿ ಮಾಡಿ ಬದುಕು ಕಟ್ಟಿಕೊಂಡಿದ್ದ ರೈತರು ಆತಂಕದಿಂದಲೇ ಜೀವಿಸುತ್ತಿದ್ದರು. ಆದ್ರೀಗ, ಸರ್ಕಾರದ ಈ ನಿರ್ಧಾರ ರೈತರಿಗೆ ಕೊಂಚ ರಿಲೀಫ್ ತಂದಿದೆ. ಏಪ್ರಿಲ್ 29ಕ್ಕೆ ಚಿಕ್ಕಮಗಳೂರಿಗೆ ಆಗಮಿಸುವ ಕಂದಾಯ ಸಚಿವರು ಅದೇ ದಿನ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಯನ್ನ ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದ್ದು, ಸರ್ಕಾರ ರೈತರಿಗೆ ಭೂಮಿಯನ್ನ ಲೀಸ್ ಕೊಡೋದು ಪಕ್ಕಾ ಆದಂತಾಗಿದೆ. ಕೊಡಲಿ ಅನ್ನೋದು ನಮ್ಮ ಉದ್ದೇಶ. ರೈತ ಚೆನ್ನಾಗಿದ್ರೆ ಎಲ್ಲರೂ ಚೆನ್ನಾಗಿರ್ತಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more