ಪ್ಯಾರಾ ಏಷ್ಯನ್ ಗೇಮ್ಸ್‌ಗೆ ಗಣಿನಾಡಿನ ಯುವಕ: ಅಂಗವಿಕಲತೆಯನ್ನೂ ಮೀರಿ ಸಾಧನೆ ಗೈದ 17ರ ಪೋರ !

ಪ್ಯಾರಾ ಏಷ್ಯನ್ ಗೇಮ್ಸ್‌ಗೆ ಗಣಿನಾಡಿನ ಯುವಕ: ಅಂಗವಿಕಲತೆಯನ್ನೂ ಮೀರಿ ಸಾಧನೆ ಗೈದ 17ರ ಪೋರ !

Published : Oct 21, 2023, 11:46 AM IST

ದೇಹದ ಎಲ್ಲಾ ಅಂಗಾಂಗಗಳು ಸರಿಯಿದ್ರೂ ಸಾಧನೆ ಮಾಡಲು ವ್ಯವಸ್ಥೆಯಲ್ಲಿನ ಲೋಪದೋಷವನ್ನು ಎತ್ತಿಹಿಡಿಯೋ ಅದೆಷ್ಟೋ ಜನರ ಮಧ್ಯೆ ಅಪಘಾತವೊಂದರಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಯುವಕನೊಬ್ಬ ಇದೀಗ ಸಾಧನೆಯ ಶಿಖರವನ್ನೇರಿದ್ದಾನೆ. 
 

ಎರಡು ಕಾಲು ಇಲ್ಲದೇ ಇದ್ರೂ ಈಜುಕೊಳದಲ್ಲಿ ಬಿಟ್ಟುಬಿಡದೇ ಶರ ವೇಗದಲ್ಲಿ ಸ್ವೀಮ್ಮಿಂಗ್ ಮಾಡ್ತಿರೋ ಇವರ ಹೆಸರು ಗೋಪಿಚಂದ್. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ದರೋಜಿ ಗ್ರಾಮದ ಗೋಪಿಚಂದ್ ಚೀನಾದ ಹಾಂಕ್ಕಾಂಗ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ಗೆ(Para Asian Games) ಆಯ್ಕೆಯಾಗಿದ್ದಾನೆ. ಎರಡನೇ ತರಗತಿ ಓದುತ್ತಿದ್ದಾಗ ರಸ್ತೆ ಅಪಘಾತದಲ್ಲಿ(Accident)  ಗೋಪಿಚಂದ್ ತನ್ನ ಎರಡು ಕಾಲುಗಳನ್ನು ಕಳೆದುಕೊಂಡನು. ಆದ್ರೇ ತನಗೆ ಕಾಲಿಲ್ಲ ಎಂದು ಧೃತಿಗೇಡದ ಗೋಪಿಚಂದ್(Gopichand) ಸುಮ್ಮನೆ ಕೂಡದೆ ಸಾಧನೆಯ ಒಂದೊಂದೇ ಮೆಟ್ಟಿಲು ಹತ್ತಿ, ಇಂದು ಅಂತಾರಾಷ್ಟ್ರೀಯ ಈಜುಪಟುವಾಗಿ(Swimming) ಹೊರಹೊಮ್ಮಿದ್ದಾನೆ. ಚೀನಾದ ಹಾಂಗ್‌ಕಾಂಗ್‌ನಲ್ಲಿ ಇದೇ ತಿಂಗಳ 22 ರಿಂದ 28ರವರೆಗೆ  ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ಗೆ 17 ವರ್ಷದ ಸ್ವಿಮ್ಮಿಂಗ್ ವಿಭಾಗದಲ್ಲಿ ಆಯ್ಕೆಯಾಗಿದ್ದಾನೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದಿರುವ ಗೋಪಿಚಂದ್ ಪ್ಯಾರಾ ಏಷ್ಯಾನ್ ಗೇಮ್ಸ್ಗೆ ಆಯ್ಕೆಯಾದ ಮೊದಲ ಕನ್ನಡಿಗೆ ಎನ್ನುವ ಖ್ಯಾತಿಗೆ ಪಾತ್ರವಾಗಿದ್ದಾರೆ. ಬಳ್ಳಾರಿಯಲ್ಲಿ ಅಂಗವಿಕಲ ಮಕ್ಕಳಿಗೆ ಈಜು ಕಲಿಸೋ ವಿಶೇಷ ತರಬೇತುದಾರ ರಜಿನಿಯವರ ಹತ್ತು ವರ್ಷದ ಶ್ರಮದಿಂದಲೇ ಗೋಪಿಚಂದ ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ 23 ಚಿನ್ನ ಹಾಗೂ 8 ಬೆಳ್ಳಿ ಸೇರಿದಂತೆ ಅನೇಕ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.  ಇದೀಗ ಹೆಚ್ಚಿನ ತರಬೇತಿ ನೀಡ್ತಿರೋ ಬೆಂಗಳೂರಿನ ಶರತ್ ಗಾಯಕ್ವಾಡ ಅವರ ನಿರಂತರ ತರಬೇತಿಯಿಂದ ಇಂದು ಗೋಪಿಚಂದ ಪ್ಯಾರ ಏಷ್ಯಾನ್ ಗೇಮ್ಸ್ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more