ಪ್ಯಾರಾ ಏಷ್ಯನ್ ಗೇಮ್ಸ್‌ಗೆ ಗಣಿನಾಡಿನ ಯುವಕ: ಅಂಗವಿಕಲತೆಯನ್ನೂ ಮೀರಿ ಸಾಧನೆ ಗೈದ 17ರ ಪೋರ !

ಪ್ಯಾರಾ ಏಷ್ಯನ್ ಗೇಮ್ಸ್‌ಗೆ ಗಣಿನಾಡಿನ ಯುವಕ: ಅಂಗವಿಕಲತೆಯನ್ನೂ ಮೀರಿ ಸಾಧನೆ ಗೈದ 17ರ ಪೋರ !

Published : Oct 21, 2023, 11:46 AM IST

ದೇಹದ ಎಲ್ಲಾ ಅಂಗಾಂಗಗಳು ಸರಿಯಿದ್ರೂ ಸಾಧನೆ ಮಾಡಲು ವ್ಯವಸ್ಥೆಯಲ್ಲಿನ ಲೋಪದೋಷವನ್ನು ಎತ್ತಿಹಿಡಿಯೋ ಅದೆಷ್ಟೋ ಜನರ ಮಧ್ಯೆ ಅಪಘಾತವೊಂದರಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಯುವಕನೊಬ್ಬ ಇದೀಗ ಸಾಧನೆಯ ಶಿಖರವನ್ನೇರಿದ್ದಾನೆ. 
 

ಎರಡು ಕಾಲು ಇಲ್ಲದೇ ಇದ್ರೂ ಈಜುಕೊಳದಲ್ಲಿ ಬಿಟ್ಟುಬಿಡದೇ ಶರ ವೇಗದಲ್ಲಿ ಸ್ವೀಮ್ಮಿಂಗ್ ಮಾಡ್ತಿರೋ ಇವರ ಹೆಸರು ಗೋಪಿಚಂದ್. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ದರೋಜಿ ಗ್ರಾಮದ ಗೋಪಿಚಂದ್ ಚೀನಾದ ಹಾಂಕ್ಕಾಂಗ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ಗೆ(Para Asian Games) ಆಯ್ಕೆಯಾಗಿದ್ದಾನೆ. ಎರಡನೇ ತರಗತಿ ಓದುತ್ತಿದ್ದಾಗ ರಸ್ತೆ ಅಪಘಾತದಲ್ಲಿ(Accident)  ಗೋಪಿಚಂದ್ ತನ್ನ ಎರಡು ಕಾಲುಗಳನ್ನು ಕಳೆದುಕೊಂಡನು. ಆದ್ರೇ ತನಗೆ ಕಾಲಿಲ್ಲ ಎಂದು ಧೃತಿಗೇಡದ ಗೋಪಿಚಂದ್(Gopichand) ಸುಮ್ಮನೆ ಕೂಡದೆ ಸಾಧನೆಯ ಒಂದೊಂದೇ ಮೆಟ್ಟಿಲು ಹತ್ತಿ, ಇಂದು ಅಂತಾರಾಷ್ಟ್ರೀಯ ಈಜುಪಟುವಾಗಿ(Swimming) ಹೊರಹೊಮ್ಮಿದ್ದಾನೆ. ಚೀನಾದ ಹಾಂಗ್‌ಕಾಂಗ್‌ನಲ್ಲಿ ಇದೇ ತಿಂಗಳ 22 ರಿಂದ 28ರವರೆಗೆ  ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ಗೆ 17 ವರ್ಷದ ಸ್ವಿಮ್ಮಿಂಗ್ ವಿಭಾಗದಲ್ಲಿ ಆಯ್ಕೆಯಾಗಿದ್ದಾನೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದಿರುವ ಗೋಪಿಚಂದ್ ಪ್ಯಾರಾ ಏಷ್ಯಾನ್ ಗೇಮ್ಸ್ಗೆ ಆಯ್ಕೆಯಾದ ಮೊದಲ ಕನ್ನಡಿಗೆ ಎನ್ನುವ ಖ್ಯಾತಿಗೆ ಪಾತ್ರವಾಗಿದ್ದಾರೆ. ಬಳ್ಳಾರಿಯಲ್ಲಿ ಅಂಗವಿಕಲ ಮಕ್ಕಳಿಗೆ ಈಜು ಕಲಿಸೋ ವಿಶೇಷ ತರಬೇತುದಾರ ರಜಿನಿಯವರ ಹತ್ತು ವರ್ಷದ ಶ್ರಮದಿಂದಲೇ ಗೋಪಿಚಂದ ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ 23 ಚಿನ್ನ ಹಾಗೂ 8 ಬೆಳ್ಳಿ ಸೇರಿದಂತೆ ಅನೇಕ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.  ಇದೀಗ ಹೆಚ್ಚಿನ ತರಬೇತಿ ನೀಡ್ತಿರೋ ಬೆಂಗಳೂರಿನ ಶರತ್ ಗಾಯಕ್ವಾಡ ಅವರ ನಿರಂತರ ತರಬೇತಿಯಿಂದ ಇಂದು ಗೋಪಿಚಂದ ಪ್ಯಾರ ಏಷ್ಯಾನ್ ಗೇಮ್ಸ್ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more