ಕೋಟಿ ಖರ್ಚು ಮಾಡಿದ್ರೂ ವಾಸಕ್ಕೆ ಯೋಗ್ಯವಿಲ್ಲ..! ಕುಡಿಯೋಕೆ ನೀರಿಲ್ಲ..ಡ್ರೈನೇಜ್ ಮೊದಲೇ ಇಲ್ಲ..!

ಕೋಟಿ ಖರ್ಚು ಮಾಡಿದ್ರೂ ವಾಸಕ್ಕೆ ಯೋಗ್ಯವಿಲ್ಲ..! ಕುಡಿಯೋಕೆ ನೀರಿಲ್ಲ..ಡ್ರೈನೇಜ್ ಮೊದಲೇ ಇಲ್ಲ..!

Published : Sep 12, 2023, 09:46 AM IST

ಅವು ಬಡವರಿಗಾಗಿ ನಿರ್ಮಿಸಿದ್ದ ಮನೆಗಳು.. ಆದ್ರೆ ನಿರ್ಮಾಣ ಮಾಡಿ ವರ್ಷಗಳೇ ಕಳೆದ್ರು ಈ ಮನೆಗಳು ಬಡವರ ಕೈ ಸೇರಿಲ್ಲ. ಕಟ್ಟಡ ನಿರ್ಮಾಣವಾಗಿದ್ರೂ ಮೂಲಭೂತ ಸೌಕರ್ಯದ ವ್ಯವಸ್ಥೆ ಇಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯವೋ.. ಅಥವಾ ಜನಪ್ರತಿನಿಧಿಗಳ ಉಡಾಫೆಯೋ ಗೊತ್ತಿಲ್ಲ. ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರೋ ಮನೆ ಮಾತ್ರ ವಾಸ ಮಾಡೋರಿಲ್ಲದೆ ಬಣಗುಡ್ತಿವೆ.

ಸಾಲು ಸಾಲಾಗಿ ತಲೆ ಎತ್ತಿ ನಿಂತಿರೋ ಸಾವಿರಾರು ಮನೆಗಳು.. ದೂರದಿಂದ ನೋಡೋಕೆ ಭರ್ಜರಿಯಾಗಿ ಕಾಣೋ ಕಟ್ಟಡಗಳು.. ಆದ್ರೆ ಒಳಗೆ ಹೋಗಿ ನೋಡಿದ್ರೆ ಕಾಣೋದೆಲ್ಲ ಶೂನ್ಯ.. ಮೂಲಭೂತ ಸೌಕರ್ಯಗಳಿಲ್ಲ(Basic Facilities). ನೀರು, ಡ್ರೈನೇಜ್ ವ್ಯವಸ್ಥೆ ಇಲ್ಲ. ಈ ದೃಶ್ಯ ಕಂಡು ಬಂದಿದ್ದು ಬಳ್ಳಾರಿ (Ballari)ಹೊರವಲಯದ ಮುಂಡ್ರಗಿ ಲೇಔಟ್ನಲ್ಲಿ. ಮಹಾತ್ಮ ಗಾಂಧಿ ಟೌನ್ ಶಿಪ್ ಹೆಸರಿನ ಈ ಮನೆಗಳನ್ನು, 2013ರಿಂದ 18ರಲ್ಲಿ ಸಿದ್ದರಾಮಯ್ಯ ಸರ್ಕಾರ ಬಡವರಿಗೆ ನೀಡಿತ್ತು. ಕಡಿಮೆ ದರದಲ್ಲಿ ಅಂದಿನ ಉಸ್ತುವಾರಿ ಸಚಿವ ಸಂತೋಷ ಲಾಡ್ ಈ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ರು. ಆಗ ಸ್ವಲ್ಪ ಕೆಲಸವಾದ್ರೂ, ನಂತರ ಬಂದ ಬಿಜೆಪಿ ಸರ್ಕಾರದಲ್ಲಿ 5600 ಮನೆಗಳ ನಿರ್ಮಾಣಕ್ಕೆ ಕೈ ಹಾಕಲಾಗಿತ್ತು. ಇದರಲ್ಲಿ ಈಗ 1 ಸಾವಿರ ಮನೆ ಸಿದ್ಧಗೊಂಡಿದೆ. ಆದ್ರೆ ಮನೆಗಳು(Houses) ಮಾತ್ರ ಇನ್ನೂ ಹಂಚಿಕೆಯಾಗಿಲ್ಲ. ಇದಕ್ಕೆ ಕಾರಣ ಮನೆಗಳಿಗೆ ಮೂಲಭೂತ ಸೌಲಭ್ಯಗಳಾದ ನೀರು, ಚರಂಡಿ ಸೇರಿದಂತೆ ಟ್ರಾನ್ಸ್ಪೋರ್ಟ್ ವ್ಯವಸ್ಥೆ ಇಲ್ಲದೇ ಇರೋದು. ಬಿಜೆಪಿ(BJP) ಸರ್ಕಾರದ ಅಂತ್ಯ ಕಾಲದಲ್ಲಿ ಲಾಟರಿ(Lottery) ಮೂಲಕ ಕೆಲವು ಮನೆಗಳನ್ನ ಹಂಚಲಾಗಿತ್ತು. ಮನೆಗಳಿಗೆ ಮೂಲಭೂತ ಸೌಕರ್ಯ ಇಲ್ಲ ಅನ್ನೋ ಕಾರಣಕ್ಕೆ ಮನೆ ಪಡೆದ ಬಹುತೇಕರು ಹಣ ಕಟ್ಟಿಲ್ಲ. ಆದ್ರೆ ಈ ಮನೆಗಳ ವಿಚಾರದಲ್ಲೂ ರಾಜಕೀಯ ತಲೆದೂರಿದ್ದು, ಬಿಜೆಪಿ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಮನೆ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದಕ್ಕೆ ಸಿಟ್ಟಾದ ಸೋಮಶೇಖರ ರೆಡ್ಡಿ ಆ ರೀತಿ ಒಂದು ಮನೆ ಹಂಚಿಕೆಯಾದ್ರೂ ತೋರಿಸಿ ಎಂದು ಸವಾಲು ಹಾಕಿದ್ದಾರೆ.

 ಇದನ್ನೂ ವೀಕ್ಷಿಸಿ:  ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿ ವಿಸ್ತರಣೆ: ತಾಲೂಕಿನ 28 ಗ್ರಾಮಗಳಿಗೆ ಬುಡಾ ನೋಟಿಸ್ !

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more