ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

Published : Jul 19, 2024, 09:09 AM IST

ನಟ ದರ್ಶನ್‌ಗೆ ಅವಕಾಶ ಕೊಟ್ಟರೆ ಬೇರೆಯವರು ಕೇಳುವ ಸಾಧ್ಯತೆ
ಜೈಲಿನ ನಿಯಮಗಳ ಪ್ರಕಾರ ಆರೋಪಿ ಜೈಲಿನ ಬಟ್ಟೆ ಹಾಕಬೇಕು
ಕಾನೂನಿನ ಕಣ್ಣಿನಲ್ಲಿ ದರ್ಶನ್ ಕೂಡ ಇತರೇ ಆರೋಪಿಗಳಿಂತೆಯೇ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ (Darshan) & ಗ್ಯಾಂಗ್‌ಗೆ ಮತ್ತೆ ನ್ಯಾಯಾಂಗ ಬಂಧನ (Judicial custody) ವಿಸ್ತರಣೆಯಾಗಿದೆ. ಮುಂದಿನ 14 ದಿನಗಳ ಕಾಲ, ಅಂದ್ರೆ ಆಗಸ್ಟ್ 1ರ ವರೆಗೂ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಹಾಗೆನೆ ಆರೋಪಿ ದರ್ಶನ್ ಇಟ್ಟಿದ್ದ ಕೆಲ ಬೇಡಿಕೆಗಳನ್ನು ಪೊಲೀಸರು(Police) ಪ್ರಶ್ನೆ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ(Pavitra gowda) ಮತ್ತು ದರ್ಶನ್ ಸೇರಿದಂತೆ ಒಟ್ಟು ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರನ್ನೆಲ್ಲ ಕಳೆದ ತಿಂಗಳು 22 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಎರಡು ಬಾರಿ ನ್ಯಾಯಾಂಗ ಬಂಧನ ವಿಸ್ತರಣೆ ನಂತರ ಇಂದು ಮತ್ತೆ ಈ ಆರೋಪಿಗಳ ನ್ಯಾಯಾಂಗ ಬಂಧನ ಮುಕ್ತಾಯಗೊಂಡಿತ್ತು. ಮತ್ತೆ ಈ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ವಿಚಾರಣೆಯ ಮುಂದಿನ ದಿನಾಂಕವನ್ನು ಆಗಸ್ಟ್ 1ನೇ ತಾರೀಕಿಗೆ ಮುಂದೂಡಲಾಗಿದೆ. ಅಂದ್ರೆ ಮತ್ತೆ 14 ದಿನಗಳ ಕಾಲ ದರ್ಶನ್ & ಗ್ಯಾಂಗ್ ಮತ್ತೆ ನ್ಯಾಯಾಂಗ ಬಂಧನದಲ್ಲೇ ಇರಲಿದ್ದಾರೆ. ದರ್ಶನ್ ಕೆಲ ದಿನಗಳ ಹಿಂದೆ ಹಲವು ಬೇಡಿಕೆಗಳನ್ನಿಟ್ಟು ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ದರ್ಶನ್ ಈ ಹಿಂದೆ ಯಾವೆಲ್ಲ ಬೇಡಿಕೆಗಳನ್ನಿಟ್ಟುದ್ದರು ಅನ್ನೋದನ್ನು ನೋಡೋದಾದ್ರೆ, ದರ್ಶನ್‌ಗೆ  ಮನೆ ಊಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಜೈಲಿನಲ್ಲಿ ಕೊಡುವ ಊಟ ದರ್ಶನ್‌ಗೆ ಇಷ್ಟವಾಗುತ್ತಿಲ್ಲವಂತೆ. ದರ್ಶನ್ ಇಲ್ಲಿಯವರೆಗೂ ಜೈಲಿನ ಊಟ ಮಾಡಿದ್ದರಿಂದಾಗಿ ಹೊಟ್ಟೆ ಕೆಟ್ಟಿದೆಯಂತೆ. ವಾಂತಿ ಭೇದಿಯಾಗುತ್ತಿದೆಯಂತೆ. ಇದರಿಂದಾಗಿ ಆರೋಗ್ಯದಲ್ಲೂ ಒಂದಿಷ್ಟು ವ್ಯತ್ಯಾಸವಾಗಿದೆಯಂತೆ. ಹೀಗಾಗಿ ಜೈಲುಟ ಮಾಡಿ ತುಂಬಾನೇ ತೊಂದರೆ ಅನುಭವಿಸುತ್ತಿರುವ ದರ್ಶನ್ ಜೈಲಿನಲ್ಲಿ ಮನೆ ಊಟಕ್ಕೆ ಅವಕಾಶ ಕೋರಿದ್ದರು. ಆದ್ರೆ ದರ್ಶನ್ ಇಟ್ಟ ಈ ಬೇಡಿಕೆಯನ್ನು ಸರ್ಕಾರದ ಪರ ವಕೀಲರು ಮನೆಯೂಟ ಕೊಡ ಕೂಡದೆಂದು ವಾದ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಿಎಂ ಅನುಭವಿಸಿದ್ದ ಪಂಚೆ ಅವಮಾನದ ಆ ಕಥೆ ಏನು? ಪಂಚೆ ಹಾಕೋರೆಲ್ಲಾ ಬಡವರಲ್ಲ, ಪ್ಯಾಂಟ್ ಹಾಕೋರೆಲ್ಲಾ ಶ್ರೀಮಂತರಲ್ಲ..!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!