ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

Published : Jul 19, 2024, 09:09 AM IST

ನಟ ದರ್ಶನ್‌ಗೆ ಅವಕಾಶ ಕೊಟ್ಟರೆ ಬೇರೆಯವರು ಕೇಳುವ ಸಾಧ್ಯತೆ
ಜೈಲಿನ ನಿಯಮಗಳ ಪ್ರಕಾರ ಆರೋಪಿ ಜೈಲಿನ ಬಟ್ಟೆ ಹಾಕಬೇಕು
ಕಾನೂನಿನ ಕಣ್ಣಿನಲ್ಲಿ ದರ್ಶನ್ ಕೂಡ ಇತರೇ ಆರೋಪಿಗಳಿಂತೆಯೇ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ (Darshan) & ಗ್ಯಾಂಗ್‌ಗೆ ಮತ್ತೆ ನ್ಯಾಯಾಂಗ ಬಂಧನ (Judicial custody) ವಿಸ್ತರಣೆಯಾಗಿದೆ. ಮುಂದಿನ 14 ದಿನಗಳ ಕಾಲ, ಅಂದ್ರೆ ಆಗಸ್ಟ್ 1ರ ವರೆಗೂ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಹಾಗೆನೆ ಆರೋಪಿ ದರ್ಶನ್ ಇಟ್ಟಿದ್ದ ಕೆಲ ಬೇಡಿಕೆಗಳನ್ನು ಪೊಲೀಸರು(Police) ಪ್ರಶ್ನೆ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ(Pavitra gowda) ಮತ್ತು ದರ್ಶನ್ ಸೇರಿದಂತೆ ಒಟ್ಟು ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರನ್ನೆಲ್ಲ ಕಳೆದ ತಿಂಗಳು 22 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಎರಡು ಬಾರಿ ನ್ಯಾಯಾಂಗ ಬಂಧನ ವಿಸ್ತರಣೆ ನಂತರ ಇಂದು ಮತ್ತೆ ಈ ಆರೋಪಿಗಳ ನ್ಯಾಯಾಂಗ ಬಂಧನ ಮುಕ್ತಾಯಗೊಂಡಿತ್ತು. ಮತ್ತೆ ಈ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ವಿಚಾರಣೆಯ ಮುಂದಿನ ದಿನಾಂಕವನ್ನು ಆಗಸ್ಟ್ 1ನೇ ತಾರೀಕಿಗೆ ಮುಂದೂಡಲಾಗಿದೆ. ಅಂದ್ರೆ ಮತ್ತೆ 14 ದಿನಗಳ ಕಾಲ ದರ್ಶನ್ & ಗ್ಯಾಂಗ್ ಮತ್ತೆ ನ್ಯಾಯಾಂಗ ಬಂಧನದಲ್ಲೇ ಇರಲಿದ್ದಾರೆ. ದರ್ಶನ್ ಕೆಲ ದಿನಗಳ ಹಿಂದೆ ಹಲವು ಬೇಡಿಕೆಗಳನ್ನಿಟ್ಟು ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ದರ್ಶನ್ ಈ ಹಿಂದೆ ಯಾವೆಲ್ಲ ಬೇಡಿಕೆಗಳನ್ನಿಟ್ಟುದ್ದರು ಅನ್ನೋದನ್ನು ನೋಡೋದಾದ್ರೆ, ದರ್ಶನ್‌ಗೆ  ಮನೆ ಊಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಜೈಲಿನಲ್ಲಿ ಕೊಡುವ ಊಟ ದರ್ಶನ್‌ಗೆ ಇಷ್ಟವಾಗುತ್ತಿಲ್ಲವಂತೆ. ದರ್ಶನ್ ಇಲ್ಲಿಯವರೆಗೂ ಜೈಲಿನ ಊಟ ಮಾಡಿದ್ದರಿಂದಾಗಿ ಹೊಟ್ಟೆ ಕೆಟ್ಟಿದೆಯಂತೆ. ವಾಂತಿ ಭೇದಿಯಾಗುತ್ತಿದೆಯಂತೆ. ಇದರಿಂದಾಗಿ ಆರೋಗ್ಯದಲ್ಲೂ ಒಂದಿಷ್ಟು ವ್ಯತ್ಯಾಸವಾಗಿದೆಯಂತೆ. ಹೀಗಾಗಿ ಜೈಲುಟ ಮಾಡಿ ತುಂಬಾನೇ ತೊಂದರೆ ಅನುಭವಿಸುತ್ತಿರುವ ದರ್ಶನ್ ಜೈಲಿನಲ್ಲಿ ಮನೆ ಊಟಕ್ಕೆ ಅವಕಾಶ ಕೋರಿದ್ದರು. ಆದ್ರೆ ದರ್ಶನ್ ಇಟ್ಟ ಈ ಬೇಡಿಕೆಯನ್ನು ಸರ್ಕಾರದ ಪರ ವಕೀಲರು ಮನೆಯೂಟ ಕೊಡ ಕೂಡದೆಂದು ವಾದ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಿಎಂ ಅನುಭವಿಸಿದ್ದ ಪಂಚೆ ಅವಮಾನದ ಆ ಕಥೆ ಏನು? ಪಂಚೆ ಹಾಕೋರೆಲ್ಲಾ ಬಡವರಲ್ಲ, ಪ್ಯಾಂಟ್ ಹಾಕೋರೆಲ್ಲಾ ಶ್ರೀಮಂತರಲ್ಲ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!