ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

Published : Jan 23, 2024, 01:09 PM ISTUpdated : Jan 23, 2024, 01:10 PM IST

ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ ನೀಡುತ್ತಿದ್ದ ಸಂಬಳವನ್ನು ತಡೆ ಹಿಡಿದು, 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡುವಂತೆ ಸರ್ಕಾರ ನೋಟಿಸ್‌ ನೀಡಿದೆ.

ಚಿಕ್ಕಮಗಳೂರು: ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನ ರಾಜ್ಯ ಸರ್ಕಾರ ವಾಪಸ್ ಕೇಳಿದೆ. ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ(Hiremagalur Kannan) ನೋಟಿಸ್ ನೀಡಲಾಗಿದೆ. ವೇತನ ತಡೆಹಿಡಿದು ನೋಟಿಸ್‌ನನ್ನು(Notice) ಚಿಕ್ಕಮಗಳೂರು(Chikkamagaluru) ಜಿಲ್ಲಾಡಳಿತ ನೀಡಿದೆ. ದೇವಾಲಯದ ಆದಾಯ ಕಡಿಮೆ, ಸಂಬಳ ಹೆಚ್ಚು ನೀಡಲಾಗಿದೆ ಎಂದು ನೋಟಿಸ್ ನೀಡಲಾಗಿದೆ. 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡಲು ಸೂಚಿಸಲಾಗಿದೆ. ಒಟ್ಟಾರೆ 4,74,000 ರೂಪಾಯಿ ವಾಪಸ್ ನೀಡುವಂತೆ ಸೂಚನೆ ಬಂದಿದೆ. ಹಿರೇಮಗಳೂರು ಕಣ್ಣನ್‌ ಕೋದಂಡ ರಾಮ ದೇವಾಲಯದ(Kodandarama temple) ಪ್ರಧಾನ ಅರ್ಚಕರಾಗಿದ್ದಾರೆ(Priest). ವೇತನ ತಡೆ ಹಿಡಿದು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಜಮೆಯಾಗುತ್ತಿದ್ದ ಸಂಬಳ 7500. ಆದ್ರೆ 7500 ರೂಪಾಯಿ ನೀಡಿದ ಸಂಬಳದಲ್ಲಿ 4500 ವಾಪಸ್ ನೀಡಲು ಸೂಚನೆ ಬಂದಿದೆ. ದೇವಾಲಯದ ಆದಾಯ ಕಡಿಮೆ‌ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡಲು ಸೂಚಿಸಲಾಗಿದೆಯಂತೆ. ಚಿಕ್ಕಮಗಳೂರು ತಹಶೀಲ್ದಾರ್‌ ಸುಮಂತ್ ರಿಂದ ನೋಟಿಸ್ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more