ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

Published : Jun 25, 2022, 04:58 PM IST

ನ್ಯಾಮತಿ: ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. 

ದಾವಣಗೆರೆ (ಜೂ. 25): ನ್ಯಾಮತಿ (Nyamathi) ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. ಶಿವಮೊಗ್ಗ ತಾಲೂಕು ನಾರಾಯಣಪುರ ಗ್ರಾಪಂ ಸದಸ್ಯ ಲೋಕೇಶ್‌ ನಾಯ್ಕ ಮತ್ತು ಚಿಕ್ಕ ದೊಡ್ಡಪ್ಪನ ಮಕ್ಕಳಾದ ಸುರೇಶ್‌ ನಾಯ್ಕರಿಗೆ ಜಮೀನು ವಿಚಾರದಲ್ಲಿ ಶುಕ್ರವಾರ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಪ್ರಕ​ರ​ಣದ ವಿಚಾ​ರಣೆ ಇತ್ತು.

ಸುರೇಶ್‌ ನಾಯ್ಕ ಪರವಾಗಿ ಆದೇಶವಾದ ಹಿನ್ನೆಲೆಯಲ್ಲಿ ಲೋಕೇಶ್‌ ನಾಯ್ಕ ತಹಸೀಲ್ದಾರ್‌ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ. ನ್ಯಾಮತಿ ತಾಲೂಕು ಚಿನ್ನಿಕಟ್ಟೆಗ್ರಾಮದ ಪಕ್ಕದ ಲಕ್ಕಿನಕೊಪ್ಪ ಗ್ರಾಮದಲ್ಲಿ ಇವರ ಜಮೀನು ಇದ್ದು ಚಿಕ್ಕ ದೊಡ್ಡಪ್ಪನವರ ಅಣ್ಣ ತಮ್ಮಂದಿರ ಜಗಳದಲ್ಲಿ ನ್ಯಾಮತಿ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಕೇಸು ಹಾಕಲಾಗಿತ್ತು. ವಿಷಕುಡಿದ ಲೋಕೇಶ್‌ ನಾಯ್ಕನನ್ನು  ನ್ಯಾಮತಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more