ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

Published : Jun 25, 2022, 04:58 PM IST

ನ್ಯಾಮತಿ: ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. 

ದಾವಣಗೆರೆ (ಜೂ. 25): ನ್ಯಾಮತಿ (Nyamathi) ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. ಶಿವಮೊಗ್ಗ ತಾಲೂಕು ನಾರಾಯಣಪುರ ಗ್ರಾಪಂ ಸದಸ್ಯ ಲೋಕೇಶ್‌ ನಾಯ್ಕ ಮತ್ತು ಚಿಕ್ಕ ದೊಡ್ಡಪ್ಪನ ಮಕ್ಕಳಾದ ಸುರೇಶ್‌ ನಾಯ್ಕರಿಗೆ ಜಮೀನು ವಿಚಾರದಲ್ಲಿ ಶುಕ್ರವಾರ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಪ್ರಕ​ರ​ಣದ ವಿಚಾ​ರಣೆ ಇತ್ತು.

ಸುರೇಶ್‌ ನಾಯ್ಕ ಪರವಾಗಿ ಆದೇಶವಾದ ಹಿನ್ನೆಲೆಯಲ್ಲಿ ಲೋಕೇಶ್‌ ನಾಯ್ಕ ತಹಸೀಲ್ದಾರ್‌ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ. ನ್ಯಾಮತಿ ತಾಲೂಕು ಚಿನ್ನಿಕಟ್ಟೆಗ್ರಾಮದ ಪಕ್ಕದ ಲಕ್ಕಿನಕೊಪ್ಪ ಗ್ರಾಮದಲ್ಲಿ ಇವರ ಜಮೀನು ಇದ್ದು ಚಿಕ್ಕ ದೊಡ್ಡಪ್ಪನವರ ಅಣ್ಣ ತಮ್ಮಂದಿರ ಜಗಳದಲ್ಲಿ ನ್ಯಾಮತಿ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಕೇಸು ಹಾಕಲಾಗಿತ್ತು. ವಿಷಕುಡಿದ ಲೋಕೇಶ್‌ ನಾಯ್ಕನನ್ನು  ನ್ಯಾಮತಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more