ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

Published : Jun 25, 2022, 04:58 PM IST

ನ್ಯಾಮತಿ: ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. 

ದಾವಣಗೆರೆ (ಜೂ. 25): ನ್ಯಾಮತಿ (Nyamathi) ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. ಶಿವಮೊಗ್ಗ ತಾಲೂಕು ನಾರಾಯಣಪುರ ಗ್ರಾಪಂ ಸದಸ್ಯ ಲೋಕೇಶ್‌ ನಾಯ್ಕ ಮತ್ತು ಚಿಕ್ಕ ದೊಡ್ಡಪ್ಪನ ಮಕ್ಕಳಾದ ಸುರೇಶ್‌ ನಾಯ್ಕರಿಗೆ ಜಮೀನು ವಿಚಾರದಲ್ಲಿ ಶುಕ್ರವಾರ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಪ್ರಕ​ರ​ಣದ ವಿಚಾ​ರಣೆ ಇತ್ತು.

ಸುರೇಶ್‌ ನಾಯ್ಕ ಪರವಾಗಿ ಆದೇಶವಾದ ಹಿನ್ನೆಲೆಯಲ್ಲಿ ಲೋಕೇಶ್‌ ನಾಯ್ಕ ತಹಸೀಲ್ದಾರ್‌ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ. ನ್ಯಾಮತಿ ತಾಲೂಕು ಚಿನ್ನಿಕಟ್ಟೆಗ್ರಾಮದ ಪಕ್ಕದ ಲಕ್ಕಿನಕೊಪ್ಪ ಗ್ರಾಮದಲ್ಲಿ ಇವರ ಜಮೀನು ಇದ್ದು ಚಿಕ್ಕ ದೊಡ್ಡಪ್ಪನವರ ಅಣ್ಣ ತಮ್ಮಂದಿರ ಜಗಳದಲ್ಲಿ ನ್ಯಾಮತಿ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಕೇಸು ಹಾಕಲಾಗಿತ್ತು. ವಿಷಕುಡಿದ ಲೋಕೇಶ್‌ ನಾಯ್ಕನನ್ನು  ನ್ಯಾಮತಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more