Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Suvarna News   | Asianet News
Published : Feb 12, 2022, 12:59 PM IST

*  ತೆರಿಗೆಗಾಗಿ ಹಠ ಬಿಡದ ಗ್ರಾಮ ಪಂಚಾಯತಿ ಪಿಡಿಓ
*  ನೋಟಿಸ್ ಜಾರಿ  ಮಾಡಿದ್ರೂ ತೆರಿಗೆ ಕಟ್ಟದೆ ಕಾಮಗಾರಿ
*  ಆಯುಕ್ತರಿಂದ ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ
 

ಧಾರವಾಡ(ಫೆ.12):  ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟು ತರಾಟೆಗೆ ತೆಗೆದುಕ್ಕೊಳ್ಳುತ್ತಿರುವ ಗ್ರಾಮಸ್ಥರು. ಇದೆಲ್ಲ ನಡಿತಾ ಇರೋದು ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ. ಗ್ರಾಮ ಪಂಚಾಯತಿ ಪಿಡಿಓನಿಂದ ಎಲ್ ಆ್ಯಂಡ್‌ ಟಿ‌ ಕಂಪನಿಗೆ ನೋಟಿಸ್ ಜಾರಿಯಾಗಿದೆ. ನೋಟಿಸ್ ಜಾರಿ ಯಾಗಿ ಮೂರು ತಿಂಗಳು ಕಳೆದ್ರೂ ತೆರಿಗೆ ಕಟ್ಟದೆ, ಎಲ್ ಆ್ಯಂಡ್‌ ಟಿ ಕಂಪನಿ ಕೆಲಸವನ್ನ‌ ಮಾಡುತ್ತಿದೆ. 

ಸವದತ್ತಿಯಿಂದ ಧಾರವಾಡದವರೆಗೆ ನಡೆಯುತ್ತಿರುವ 24x7 ಕುಡಿಯುವ ನೀರಿನ ಕಾಮಗಾರಿ ಇದಾಗಿದೆ. ಇನ್ನು ಪಂಚಾಯತ ರಾಜ್ಯ ಕಾಯ್ದೆ 1993 ರ 66 ಎ ಮತ್ತು 66 ಬಿ ಅಧಿನಿಯಮದಡಿಯಲ್ಲಿ ನೋಟಿಸ್ ಜಾರಿ  ಮಾಡಿದ್ರೂ, ಪಂಚಾಯತಿಗೆ ತೆರಿಗೆ ಕಟ್ಟದೆ ಕೆಲಸವನ್ನ ಮಾಡುತ್ತಿದ್ದಾರೆ‌. ಗ್ರಾಮ ಪಂಚಾಯತಿಯ 47,348.220 ಚದರ ಮಿಟರ್ ಜಾಗವನ್ನ ಬಳಕೆ ಮಾಡಿಕೊಂಡ ಎಲ್ ಆ್ಯಂಡ್‌ ಟಿ ಕಂಪನಿ 2 ಕೋಟಿ 72 ಲಕ್ಷದ 25 ಸಾವಿರದ 226 ರೂಪಾಯಿ 50 ಪೈಸೆ ಟ್ಯಾಕ್ಸ್ ಕಟ್ಟಬೇಕಿದೆ.  ಹಾರೋಬೆಳವಡಿ ಗ್ರಾಮ ಪಂಚಾಯತಿ ಪಿಡಿಓ ಅವರಿಂದ 13 ಅಕ್ಟೋಬರ್ 2021ರಂದು ನೋಟಿಸ್ ಜಾರಿಯಾಗಿದೆ. ಇನ್ನು ಕಾಮಗಾರಿ ಕಳಪೆಯಾಗುತ್ತಿದೆ ಎಂದು ತಾ ಪಂ ಮಾಜಿ ಆಧ್ಯಕ್ಷ ಈರಣ್ಣ ಏಣಗಿ ಆರೋಪವನ್ನ ಮಾಡಿದ್ದಾರೆ.

Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ

ನೋಟಿಸ್ ನೀಡಿ 7 ದಿನಗಳೊಳಗಾಗಿ ಪಂಚಾಯತಿ ಟ್ಯಾಕ್ಸ್ ಕಟ್ಟಬೇಕು ಎಂದು ನೋಟಿಸ್ ಜಾರಿಯಾದ್ರು ಇನ್ನುವೆರೆಗೂ ಟ್ಯಾಕ್ಸ್ ಕಟ್ಟದೆ ಕೆಲಸವನ್ನ ಆರಂಭಿಸಿದ್ದಾರೆ. ಬರೊಬ್ಬರಿ 760 ಕೋಟಿ ಪ್ರೊಜೆಕ್ಟ್‌ ಕಾಮಗಾರಿ ಕಳೆದ 8 ತಿಂಗಳಿಂದ ಆರಂಭವಾಗಿದ್ದು, ಇನ್ನು ಐದು ವರ್ಷ ನಡೆಯಲಿದೆ. ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಗೆ ಪ್ರತಿ ಮನೆ ಮನೆಗೆ ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆಯನ್ನ ಜಾರಿಗೆ ತಂದಿದೆ. 2023 ಕ್ಕೆ ಇದನ್ನ ಕಂಪ್ಲೀಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ತೆರಿಗೆಯನ್ನ ಕಟ್ಟಬೇಕು ಎಂಬ ವಿಚಾರವಾಗಿ ಪಾಲಿಕೆ‌ ಕಮಿಷನರ್ ಗೋಪಾಲಕೃಷ್ಣ ಅವರನ್ನ ಕೇಳಿದ್ರೆ ನಾನು ಈಗತಾನೆ ಅಧಿಕಾರವನ್ನ ವಹಿಸಿಕ್ಕೊಂಡಿದ್ದೆನೆ, ಆದಷ್ಟೂ ಬೇಗ ನಾನು ತೆರಿಗೆ ಕಟ್ಟೋದರ ಬಗ್ಗೆ ವಿಚಾರ ಮಾಡಿ, ಒಂದು ವೇಳೆ ಕಟ್ಟಲೆಬೇಕು ಎಂದು ಆದೇಶ ವಿದ್ರೆ ಅದನ್ನ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಿ ನಾವು ಕಟ್ಟಿಸಲೆಬೇಕಾಗುತ್ತದೆ. ಆದಷ್ಟೂ ಬೇಗ ನಾನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೆನೆ ಅಂತಾರೆ ಕಮಿಷನರ್. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more