Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Suvarna News   | Asianet News
Published : Feb 12, 2022, 12:59 PM IST

*  ತೆರಿಗೆಗಾಗಿ ಹಠ ಬಿಡದ ಗ್ರಾಮ ಪಂಚಾಯತಿ ಪಿಡಿಓ
*  ನೋಟಿಸ್ ಜಾರಿ  ಮಾಡಿದ್ರೂ ತೆರಿಗೆ ಕಟ್ಟದೆ ಕಾಮಗಾರಿ
*  ಆಯುಕ್ತರಿಂದ ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ
 

ಧಾರವಾಡ(ಫೆ.12):  ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟು ತರಾಟೆಗೆ ತೆಗೆದುಕ್ಕೊಳ್ಳುತ್ತಿರುವ ಗ್ರಾಮಸ್ಥರು. ಇದೆಲ್ಲ ನಡಿತಾ ಇರೋದು ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ. ಗ್ರಾಮ ಪಂಚಾಯತಿ ಪಿಡಿಓನಿಂದ ಎಲ್ ಆ್ಯಂಡ್‌ ಟಿ‌ ಕಂಪನಿಗೆ ನೋಟಿಸ್ ಜಾರಿಯಾಗಿದೆ. ನೋಟಿಸ್ ಜಾರಿ ಯಾಗಿ ಮೂರು ತಿಂಗಳು ಕಳೆದ್ರೂ ತೆರಿಗೆ ಕಟ್ಟದೆ, ಎಲ್ ಆ್ಯಂಡ್‌ ಟಿ ಕಂಪನಿ ಕೆಲಸವನ್ನ‌ ಮಾಡುತ್ತಿದೆ. 

ಸವದತ್ತಿಯಿಂದ ಧಾರವಾಡದವರೆಗೆ ನಡೆಯುತ್ತಿರುವ 24x7 ಕುಡಿಯುವ ನೀರಿನ ಕಾಮಗಾರಿ ಇದಾಗಿದೆ. ಇನ್ನು ಪಂಚಾಯತ ರಾಜ್ಯ ಕಾಯ್ದೆ 1993 ರ 66 ಎ ಮತ್ತು 66 ಬಿ ಅಧಿನಿಯಮದಡಿಯಲ್ಲಿ ನೋಟಿಸ್ ಜಾರಿ  ಮಾಡಿದ್ರೂ, ಪಂಚಾಯತಿಗೆ ತೆರಿಗೆ ಕಟ್ಟದೆ ಕೆಲಸವನ್ನ ಮಾಡುತ್ತಿದ್ದಾರೆ‌. ಗ್ರಾಮ ಪಂಚಾಯತಿಯ 47,348.220 ಚದರ ಮಿಟರ್ ಜಾಗವನ್ನ ಬಳಕೆ ಮಾಡಿಕೊಂಡ ಎಲ್ ಆ್ಯಂಡ್‌ ಟಿ ಕಂಪನಿ 2 ಕೋಟಿ 72 ಲಕ್ಷದ 25 ಸಾವಿರದ 226 ರೂಪಾಯಿ 50 ಪೈಸೆ ಟ್ಯಾಕ್ಸ್ ಕಟ್ಟಬೇಕಿದೆ.  ಹಾರೋಬೆಳವಡಿ ಗ್ರಾಮ ಪಂಚಾಯತಿ ಪಿಡಿಓ ಅವರಿಂದ 13 ಅಕ್ಟೋಬರ್ 2021ರಂದು ನೋಟಿಸ್ ಜಾರಿಯಾಗಿದೆ. ಇನ್ನು ಕಾಮಗಾರಿ ಕಳಪೆಯಾಗುತ್ತಿದೆ ಎಂದು ತಾ ಪಂ ಮಾಜಿ ಆಧ್ಯಕ್ಷ ಈರಣ್ಣ ಏಣಗಿ ಆರೋಪವನ್ನ ಮಾಡಿದ್ದಾರೆ.

Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ

ನೋಟಿಸ್ ನೀಡಿ 7 ದಿನಗಳೊಳಗಾಗಿ ಪಂಚಾಯತಿ ಟ್ಯಾಕ್ಸ್ ಕಟ್ಟಬೇಕು ಎಂದು ನೋಟಿಸ್ ಜಾರಿಯಾದ್ರು ಇನ್ನುವೆರೆಗೂ ಟ್ಯಾಕ್ಸ್ ಕಟ್ಟದೆ ಕೆಲಸವನ್ನ ಆರಂಭಿಸಿದ್ದಾರೆ. ಬರೊಬ್ಬರಿ 760 ಕೋಟಿ ಪ್ರೊಜೆಕ್ಟ್‌ ಕಾಮಗಾರಿ ಕಳೆದ 8 ತಿಂಗಳಿಂದ ಆರಂಭವಾಗಿದ್ದು, ಇನ್ನು ಐದು ವರ್ಷ ನಡೆಯಲಿದೆ. ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಗೆ ಪ್ರತಿ ಮನೆ ಮನೆಗೆ ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆಯನ್ನ ಜಾರಿಗೆ ತಂದಿದೆ. 2023 ಕ್ಕೆ ಇದನ್ನ ಕಂಪ್ಲೀಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ತೆರಿಗೆಯನ್ನ ಕಟ್ಟಬೇಕು ಎಂಬ ವಿಚಾರವಾಗಿ ಪಾಲಿಕೆ‌ ಕಮಿಷನರ್ ಗೋಪಾಲಕೃಷ್ಣ ಅವರನ್ನ ಕೇಳಿದ್ರೆ ನಾನು ಈಗತಾನೆ ಅಧಿಕಾರವನ್ನ ವಹಿಸಿಕ್ಕೊಂಡಿದ್ದೆನೆ, ಆದಷ್ಟೂ ಬೇಗ ನಾನು ತೆರಿಗೆ ಕಟ್ಟೋದರ ಬಗ್ಗೆ ವಿಚಾರ ಮಾಡಿ, ಒಂದು ವೇಳೆ ಕಟ್ಟಲೆಬೇಕು ಎಂದು ಆದೇಶ ವಿದ್ರೆ ಅದನ್ನ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಿ ನಾವು ಕಟ್ಟಿಸಲೆಬೇಕಾಗುತ್ತದೆ. ಆದಷ್ಟೂ ಬೇಗ ನಾನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೆನೆ ಅಂತಾರೆ ಕಮಿಷನರ್. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more