Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Suvarna News   | Asianet News
Published : Feb 12, 2022, 12:59 PM IST

*  ತೆರಿಗೆಗಾಗಿ ಹಠ ಬಿಡದ ಗ್ರಾಮ ಪಂಚಾಯತಿ ಪಿಡಿಓ
*  ನೋಟಿಸ್ ಜಾರಿ  ಮಾಡಿದ್ರೂ ತೆರಿಗೆ ಕಟ್ಟದೆ ಕಾಮಗಾರಿ
*  ಆಯುಕ್ತರಿಂದ ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ
 

ಧಾರವಾಡ(ಫೆ.12):  ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟು ತರಾಟೆಗೆ ತೆಗೆದುಕ್ಕೊಳ್ಳುತ್ತಿರುವ ಗ್ರಾಮಸ್ಥರು. ಇದೆಲ್ಲ ನಡಿತಾ ಇರೋದು ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ. ಗ್ರಾಮ ಪಂಚಾಯತಿ ಪಿಡಿಓನಿಂದ ಎಲ್ ಆ್ಯಂಡ್‌ ಟಿ‌ ಕಂಪನಿಗೆ ನೋಟಿಸ್ ಜಾರಿಯಾಗಿದೆ. ನೋಟಿಸ್ ಜಾರಿ ಯಾಗಿ ಮೂರು ತಿಂಗಳು ಕಳೆದ್ರೂ ತೆರಿಗೆ ಕಟ್ಟದೆ, ಎಲ್ ಆ್ಯಂಡ್‌ ಟಿ ಕಂಪನಿ ಕೆಲಸವನ್ನ‌ ಮಾಡುತ್ತಿದೆ. 

ಸವದತ್ತಿಯಿಂದ ಧಾರವಾಡದವರೆಗೆ ನಡೆಯುತ್ತಿರುವ 24x7 ಕುಡಿಯುವ ನೀರಿನ ಕಾಮಗಾರಿ ಇದಾಗಿದೆ. ಇನ್ನು ಪಂಚಾಯತ ರಾಜ್ಯ ಕಾಯ್ದೆ 1993 ರ 66 ಎ ಮತ್ತು 66 ಬಿ ಅಧಿನಿಯಮದಡಿಯಲ್ಲಿ ನೋಟಿಸ್ ಜಾರಿ  ಮಾಡಿದ್ರೂ, ಪಂಚಾಯತಿಗೆ ತೆರಿಗೆ ಕಟ್ಟದೆ ಕೆಲಸವನ್ನ ಮಾಡುತ್ತಿದ್ದಾರೆ‌. ಗ್ರಾಮ ಪಂಚಾಯತಿಯ 47,348.220 ಚದರ ಮಿಟರ್ ಜಾಗವನ್ನ ಬಳಕೆ ಮಾಡಿಕೊಂಡ ಎಲ್ ಆ್ಯಂಡ್‌ ಟಿ ಕಂಪನಿ 2 ಕೋಟಿ 72 ಲಕ್ಷದ 25 ಸಾವಿರದ 226 ರೂಪಾಯಿ 50 ಪೈಸೆ ಟ್ಯಾಕ್ಸ್ ಕಟ್ಟಬೇಕಿದೆ.  ಹಾರೋಬೆಳವಡಿ ಗ್ರಾಮ ಪಂಚಾಯತಿ ಪಿಡಿಓ ಅವರಿಂದ 13 ಅಕ್ಟೋಬರ್ 2021ರಂದು ನೋಟಿಸ್ ಜಾರಿಯಾಗಿದೆ. ಇನ್ನು ಕಾಮಗಾರಿ ಕಳಪೆಯಾಗುತ್ತಿದೆ ಎಂದು ತಾ ಪಂ ಮಾಜಿ ಆಧ್ಯಕ್ಷ ಈರಣ್ಣ ಏಣಗಿ ಆರೋಪವನ್ನ ಮಾಡಿದ್ದಾರೆ.

Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ

ನೋಟಿಸ್ ನೀಡಿ 7 ದಿನಗಳೊಳಗಾಗಿ ಪಂಚಾಯತಿ ಟ್ಯಾಕ್ಸ್ ಕಟ್ಟಬೇಕು ಎಂದು ನೋಟಿಸ್ ಜಾರಿಯಾದ್ರು ಇನ್ನುವೆರೆಗೂ ಟ್ಯಾಕ್ಸ್ ಕಟ್ಟದೆ ಕೆಲಸವನ್ನ ಆರಂಭಿಸಿದ್ದಾರೆ. ಬರೊಬ್ಬರಿ 760 ಕೋಟಿ ಪ್ರೊಜೆಕ್ಟ್‌ ಕಾಮಗಾರಿ ಕಳೆದ 8 ತಿಂಗಳಿಂದ ಆರಂಭವಾಗಿದ್ದು, ಇನ್ನು ಐದು ವರ್ಷ ನಡೆಯಲಿದೆ. ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಗೆ ಪ್ರತಿ ಮನೆ ಮನೆಗೆ ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆಯನ್ನ ಜಾರಿಗೆ ತಂದಿದೆ. 2023 ಕ್ಕೆ ಇದನ್ನ ಕಂಪ್ಲೀಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ತೆರಿಗೆಯನ್ನ ಕಟ್ಟಬೇಕು ಎಂಬ ವಿಚಾರವಾಗಿ ಪಾಲಿಕೆ‌ ಕಮಿಷನರ್ ಗೋಪಾಲಕೃಷ್ಣ ಅವರನ್ನ ಕೇಳಿದ್ರೆ ನಾನು ಈಗತಾನೆ ಅಧಿಕಾರವನ್ನ ವಹಿಸಿಕ್ಕೊಂಡಿದ್ದೆನೆ, ಆದಷ್ಟೂ ಬೇಗ ನಾನು ತೆರಿಗೆ ಕಟ್ಟೋದರ ಬಗ್ಗೆ ವಿಚಾರ ಮಾಡಿ, ಒಂದು ವೇಳೆ ಕಟ್ಟಲೆಬೇಕು ಎಂದು ಆದೇಶ ವಿದ್ರೆ ಅದನ್ನ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಿ ನಾವು ಕಟ್ಟಿಸಲೆಬೇಕಾಗುತ್ತದೆ. ಆದಷ್ಟೂ ಬೇಗ ನಾನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೆನೆ ಅಂತಾರೆ ಕಮಿಷನರ್. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more