Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

Suvarna News   | Asianet News
Published : Feb 12, 2022, 12:59 PM IST

*  ತೆರಿಗೆಗಾಗಿ ಹಠ ಬಿಡದ ಗ್ರಾಮ ಪಂಚಾಯತಿ ಪಿಡಿಓ
*  ನೋಟಿಸ್ ಜಾರಿ  ಮಾಡಿದ್ರೂ ತೆರಿಗೆ ಕಟ್ಟದೆ ಕಾಮಗಾರಿ
*  ಆಯುಕ್ತರಿಂದ ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ
 

ಧಾರವಾಡ(ಫೆ.12):  ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟು ತರಾಟೆಗೆ ತೆಗೆದುಕ್ಕೊಳ್ಳುತ್ತಿರುವ ಗ್ರಾಮಸ್ಥರು. ಇದೆಲ್ಲ ನಡಿತಾ ಇರೋದು ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ. ಗ್ರಾಮ ಪಂಚಾಯತಿ ಪಿಡಿಓನಿಂದ ಎಲ್ ಆ್ಯಂಡ್‌ ಟಿ‌ ಕಂಪನಿಗೆ ನೋಟಿಸ್ ಜಾರಿಯಾಗಿದೆ. ನೋಟಿಸ್ ಜಾರಿ ಯಾಗಿ ಮೂರು ತಿಂಗಳು ಕಳೆದ್ರೂ ತೆರಿಗೆ ಕಟ್ಟದೆ, ಎಲ್ ಆ್ಯಂಡ್‌ ಟಿ ಕಂಪನಿ ಕೆಲಸವನ್ನ‌ ಮಾಡುತ್ತಿದೆ. 

ಸವದತ್ತಿಯಿಂದ ಧಾರವಾಡದವರೆಗೆ ನಡೆಯುತ್ತಿರುವ 24x7 ಕುಡಿಯುವ ನೀರಿನ ಕಾಮಗಾರಿ ಇದಾಗಿದೆ. ಇನ್ನು ಪಂಚಾಯತ ರಾಜ್ಯ ಕಾಯ್ದೆ 1993 ರ 66 ಎ ಮತ್ತು 66 ಬಿ ಅಧಿನಿಯಮದಡಿಯಲ್ಲಿ ನೋಟಿಸ್ ಜಾರಿ  ಮಾಡಿದ್ರೂ, ಪಂಚಾಯತಿಗೆ ತೆರಿಗೆ ಕಟ್ಟದೆ ಕೆಲಸವನ್ನ ಮಾಡುತ್ತಿದ್ದಾರೆ‌. ಗ್ರಾಮ ಪಂಚಾಯತಿಯ 47,348.220 ಚದರ ಮಿಟರ್ ಜಾಗವನ್ನ ಬಳಕೆ ಮಾಡಿಕೊಂಡ ಎಲ್ ಆ್ಯಂಡ್‌ ಟಿ ಕಂಪನಿ 2 ಕೋಟಿ 72 ಲಕ್ಷದ 25 ಸಾವಿರದ 226 ರೂಪಾಯಿ 50 ಪೈಸೆ ಟ್ಯಾಕ್ಸ್ ಕಟ್ಟಬೇಕಿದೆ.  ಹಾರೋಬೆಳವಡಿ ಗ್ರಾಮ ಪಂಚಾಯತಿ ಪಿಡಿಓ ಅವರಿಂದ 13 ಅಕ್ಟೋಬರ್ 2021ರಂದು ನೋಟಿಸ್ ಜಾರಿಯಾಗಿದೆ. ಇನ್ನು ಕಾಮಗಾರಿ ಕಳಪೆಯಾಗುತ್ತಿದೆ ಎಂದು ತಾ ಪಂ ಮಾಜಿ ಆಧ್ಯಕ್ಷ ಈರಣ್ಣ ಏಣಗಿ ಆರೋಪವನ್ನ ಮಾಡಿದ್ದಾರೆ.

Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ

ನೋಟಿಸ್ ನೀಡಿ 7 ದಿನಗಳೊಳಗಾಗಿ ಪಂಚಾಯತಿ ಟ್ಯಾಕ್ಸ್ ಕಟ್ಟಬೇಕು ಎಂದು ನೋಟಿಸ್ ಜಾರಿಯಾದ್ರು ಇನ್ನುವೆರೆಗೂ ಟ್ಯಾಕ್ಸ್ ಕಟ್ಟದೆ ಕೆಲಸವನ್ನ ಆರಂಭಿಸಿದ್ದಾರೆ. ಬರೊಬ್ಬರಿ 760 ಕೋಟಿ ಪ್ರೊಜೆಕ್ಟ್‌ ಕಾಮಗಾರಿ ಕಳೆದ 8 ತಿಂಗಳಿಂದ ಆರಂಭವಾಗಿದ್ದು, ಇನ್ನು ಐದು ವರ್ಷ ನಡೆಯಲಿದೆ. ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಗೆ ಪ್ರತಿ ಮನೆ ಮನೆಗೆ ದಿನದ 24 ಗಂಟೆ ಕುಡಿಯುವ ನೀರಿನ ಯೋಜನೆಯನ್ನ ಜಾರಿಗೆ ತಂದಿದೆ. 2023 ಕ್ಕೆ ಇದನ್ನ ಕಂಪ್ಲೀಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ತೆರಿಗೆಯನ್ನ ಕಟ್ಟಬೇಕು ಎಂಬ ವಿಚಾರವಾಗಿ ಪಾಲಿಕೆ‌ ಕಮಿಷನರ್ ಗೋಪಾಲಕೃಷ್ಣ ಅವರನ್ನ ಕೇಳಿದ್ರೆ ನಾನು ಈಗತಾನೆ ಅಧಿಕಾರವನ್ನ ವಹಿಸಿಕ್ಕೊಂಡಿದ್ದೆನೆ, ಆದಷ್ಟೂ ಬೇಗ ನಾನು ತೆರಿಗೆ ಕಟ್ಟೋದರ ಬಗ್ಗೆ ವಿಚಾರ ಮಾಡಿ, ಒಂದು ವೇಳೆ ಕಟ್ಟಲೆಬೇಕು ಎಂದು ಆದೇಶ ವಿದ್ರೆ ಅದನ್ನ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಿ ನಾವು ಕಟ್ಟಿಸಲೆಬೇಕಾಗುತ್ತದೆ. ಆದಷ್ಟೂ ಬೇಗ ನಾನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೆನೆ ಅಂತಾರೆ ಕಮಿಷನರ್. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more