Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು  ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?

Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?

Published : Dec 18, 2025, 07:55 PM IST

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬ ವಿಚಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು (ಡಿ.18): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯ ಹಣ ಪಾವತಿಯಲ್ಲಿನ ವ್ಯತ್ಯಯ ಈಗ ವಿಧಾನಸಭೆಯ ರಣರಂಗದಲ್ಲಿ ದೊಡ್ಡ ಮಟ್ಟದ ಜಟಾಪಟಿಗೆ ಕಾರಣವಾಗಿದೆ. ಕಳೆದ ಎರಡು ತಿಂಗಳ (ಫೆಬ್ರವರಿ ಮತ್ತು ಮಾರ್ಚ್‌) ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬ ವಿಚಾರವಾಗಿ ವಿರೋಧ ಪಕ್ಷ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಅಂತಿಮವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಪ್ಪು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ.

Gruha Lakshmi Scheme: ಗೃಹಲಕ್ಷ್ಮೀ ಹಣವನ್ನು ಕನಕ ಪಂಚಮಿ ಕಾರ್ಯಕ್ರಮಕ್ಕೆ ದಾನ ಮಾಡಿದ ಬಾದಾಮಿ ಮಹಿಳೆ!

ಬುಧವಾರ ಸದನ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ನಾಯಕರು ಗೃಹಲಕ್ಷ್ಮಿ ಯೋಜನೆಯ ಲೆಕ್ಕಾಚಾರದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರು. "ಎಲ್ಲಾ ಕಂತುಗಳ ಹಣ ಬಿಡುಗಡೆಯಾಗಿದೆ" ಎಂದು ಈ ಹಿಂದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ಹೇಳಿಕೆಯನ್ನು ಸುಳ್ಳು ಎಂದು ಕರೆದ ವಿಪಕ್ಷ ನಾಯಕರು, ದಾಖಲೆಗಳನ್ನು ಪ್ರದರ್ಶಿಸಿ ಸರ್ಕಾರಕ್ಕೆ ಡಿಚ್ಚಿ ನೀಡಿದರು. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಸುಮಾರು 5,000 ಕೋಟಿ ರೂಪಾಯಿ ಹಣ ಇನ್ನೂ ಬಾಕಿ ಇರುವುದನ್ನು ಉಲ್ಲೇಖಿಸಿ 'ಕಮಲ ಪಡೆ' ಮುಗಿಬಿದ್ದಿತು.

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more