ಸೂರಜ್‌ ರೇವಣ್ಣ ಪ್ರಕರಣ: ಹೋ ಏನಾಗಿದೆ, ಅವರು ಹಗರಣದಲ್ಲಿ ಸಿಕ್ರಾ? ಹಾಗಾದ್ರೆ ಶಿಕ್ಷೆ ಕಾದಿದೆ ಎಂದ ಜಿ.ಟಿ.ದೇವೇಗೌಡ

ಸೂರಜ್‌ ರೇವಣ್ಣ ಪ್ರಕರಣ: ಹೋ ಏನಾಗಿದೆ, ಅವರು ಹಗರಣದಲ್ಲಿ ಸಿಕ್ರಾ? ಹಾಗಾದ್ರೆ ಶಿಕ್ಷೆ ಕಾದಿದೆ ಎಂದ ಜಿ.ಟಿ.ದೇವೇಗೌಡ

Published : Jun 23, 2024, 01:36 PM ISTUpdated : Jun 23, 2024, 01:37 PM IST

ಸೂರಜ್ ರೇವಣ್ಣ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ. ತಪ್ಪು ಮಾಡಿದವರ ಪರ ನಾವು ಯಾವುತ್ತು ನಿಲಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.
 

ಸೂರಜ್ ರೇವಣ್ಣ(Suraj Revanna) ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ(GT Deve Gowda) ಮಾತನಾಡಿದ್ದು, ಸೂರಜ್ ರೇವಣ್ಣ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ. ನಿನ್ನೆಯಿಂದ ನಾನು ಹಲವು ಕಾರ್ಯಕ್ರಮಗಳಲ್ಲಿ ಬ್ಯೂಸಿ ಇದ್ದೆ. ಬೆಳಗ್ಗೆ ಪತ್ರಿಕೆ, ಟಿ.ವಿ ನೋಡಲು ಸಾಧ್ಯವಾಗಲಿಲ್ಲ. ಹೀಗಾಗಿ ಈ‌ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ. ತಪ್ಪು ಮಾಡಿದವರ ಪರ ನಾವು ಯಾವುತ್ತು ನಿಲಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ ಯಾರೇ ತಪ್ಪು ಮಾಡಿದ್ರು ತಪ್ಪೆ. ಜನತದಾಳ ಯಾವತ್ತು ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಯಾಕೆ ಮುಜುಗರ. ರಾಜ್ಯದಲ್ಲಿ ಯಾರೋ ಒಬ್ಬ ತಪ್ಪು ಮಾಡಿದರೇ ಅದಕ್ಕೆ ಆರೂವರೆ ಕೋಟಿ ಜನ ಕಾರಣನಾ ? ಅಲ್ಲ ತಾನೇ ಇದು ಕೂಡ ಹಾಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಲಿಂಗ ಕಾಮ ಆರೋಪ: ಈ ಬಗ್ಗೆ ಮಾತಾಡೋಕೆ ನಮಗೂ ಮುಜುಗರವಾಗುತ್ತೆ ಎಂದ ಚಲುವರಾಯಸ್ವಾಮಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!