News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

Published : May 27, 2022, 12:06 AM IST

ಟಿಪ್ಪು ಸಹಚರ ಶೇಖ್‌ ಆಲಿ ನವಾಬ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ

ಮಂಗಳೂರು (ಮೇ 26): ಮಳಲಿ ಮಸೀದಿಯಲ್ಲಿ (Malali Masjid) ಗೋಚರವಾಗಿರುವುದು ಮಠವೋ ಅಥವಾ ದೇವಸ್ಥಾನವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮುಂದುವರಿಯುತ್ತಿರುವಂತೆಯೇ ಟಿಪ್ಪು ಸುಲ್ತಾನ್‌ ಸಹಚರನ ದಾಳಿಯಿಂದ ಮಳಲಿ ಮಠ ನಾಶವಾದ ಬಗ್ಗೆ ಜಂಗಮ ಮಠದ ಪುಸ್ತಕದಲ್ಲಿ ಸ್ಫೋಟಕ ಅಂಶವೊಂದು ಬಹಿರಂಗವಾಗಿದೆ.

ಮಳಲಿ ಮಸೀದಿ ಜಾಗದಲ್ಲಿದ್ದ ಶೈವ ಸಂಪ್ರದಾಯದ ಮಠಕ್ಕೆ ಟಿಪ್ಪು ಸಹಚರ ದಾಳಿ ನಡೆಸಿದ್ದ. ಟಿಪ್ಪು ಸಹಚರ ಶೇಖ್‌ ಆಲಿ ನವಾಬನಿಂದ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಟಿಪ್ಪು ಸಹಚರನ ದಾಳಿಯ ಬಗ್ಗೆ ಉಲ್ಲೇಖಿಸಲಾಗಿದೆ. ಈ ಪುಸ್ತಕ ಗುರುಪುರದ ಜಂಗಮ ಲಿಂಗಾಯತ ಮಠದಿಂದ ಪ್ರಕಟಗೊಂಡಿದೆ.ಕೆಳದಿ ಅರಸರ ಬಳಿಕ ಮಳಲಿ ಪ್ರಾಂತ್ಯದಲ್ಲಿ ಟಿಪ್ಪು ಆಳ್ವಿಕೆ ನಡೆಸಿದ್ದ. ಈ ವೇಳೆ ಟಿಪ್ಪು ಸಹಚರನಿಂದ ಲಿಂಗಾಯತ ಜಂಗಮ ಮಠದ ಹಲವು ಮಠಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಯ್ತಾ ಮಳಲಿ ಮಠ?: ಗುರುಪುರ ಮಠಕ್ಕೂ ಮಸೀದಿ ವಾಸ್ತುಶಿಲ್ಪಕ್ಕೂ ಸಾಮ್ಯತೆ!

ಮಂಗಳೂರಿನಲ್ಲಿ 48 ಲಿಂಗಾಯತ ಮಠಗಳ ಪೈಕಿ 21 ಮಠಗಳು ನಾಶವಾಗಿವೆ. ಇದೇ ದಾಳಿಗೆ ತುತ್ತಾಗಿ ಮಸೀದಿ ಜಾಗದ ಲಿಂಗಾಯತ ಮಠವೂ ನಾಶವಾದ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ನವೀಕರಣ ವೇಳೆ ಮಳಲಿ ಮಸೀದಿಯಲ್ಲಿ ಪತ್ತೆಯಾಗಿದ್ದು ಲಿಂಗಾಯತ ಸಂಪ್ರದಾಯಕ್ಕೆ ಸೇರಿದ ಶೈವ ಮಠ ಎಂಬ ಚರ್ಚೆಗೆ ಗುರುಪುರದ ಜಂಗಮ ಲಿಂಗಾಯತ ಮಠದ ರುದ್ರಮುನಿ ಸ್ವಾಮೀಜಿ ಈ ಸ್ಪಷ್ಟನೆ ನೀಡುತ್ತಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more