News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

Published : May 27, 2022, 12:06 AM IST

ಟಿಪ್ಪು ಸಹಚರ ಶೇಖ್‌ ಆಲಿ ನವಾಬ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ

ಮಂಗಳೂರು (ಮೇ 26): ಮಳಲಿ ಮಸೀದಿಯಲ್ಲಿ (Malali Masjid) ಗೋಚರವಾಗಿರುವುದು ಮಠವೋ ಅಥವಾ ದೇವಸ್ಥಾನವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮುಂದುವರಿಯುತ್ತಿರುವಂತೆಯೇ ಟಿಪ್ಪು ಸುಲ್ತಾನ್‌ ಸಹಚರನ ದಾಳಿಯಿಂದ ಮಳಲಿ ಮಠ ನಾಶವಾದ ಬಗ್ಗೆ ಜಂಗಮ ಮಠದ ಪುಸ್ತಕದಲ್ಲಿ ಸ್ಫೋಟಕ ಅಂಶವೊಂದು ಬಹಿರಂಗವಾಗಿದೆ.

ಮಳಲಿ ಮಸೀದಿ ಜಾಗದಲ್ಲಿದ್ದ ಶೈವ ಸಂಪ್ರದಾಯದ ಮಠಕ್ಕೆ ಟಿಪ್ಪು ಸಹಚರ ದಾಳಿ ನಡೆಸಿದ್ದ. ಟಿಪ್ಪು ಸಹಚರ ಶೇಖ್‌ ಆಲಿ ನವಾಬನಿಂದ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಟಿಪ್ಪು ಸಹಚರನ ದಾಳಿಯ ಬಗ್ಗೆ ಉಲ್ಲೇಖಿಸಲಾಗಿದೆ. ಈ ಪುಸ್ತಕ ಗುರುಪುರದ ಜಂಗಮ ಲಿಂಗಾಯತ ಮಠದಿಂದ ಪ್ರಕಟಗೊಂಡಿದೆ.ಕೆಳದಿ ಅರಸರ ಬಳಿಕ ಮಳಲಿ ಪ್ರಾಂತ್ಯದಲ್ಲಿ ಟಿಪ್ಪು ಆಳ್ವಿಕೆ ನಡೆಸಿದ್ದ. ಈ ವೇಳೆ ಟಿಪ್ಪು ಸಹಚರನಿಂದ ಲಿಂಗಾಯತ ಜಂಗಮ ಮಠದ ಹಲವು ಮಠಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಯ್ತಾ ಮಳಲಿ ಮಠ?: ಗುರುಪುರ ಮಠಕ್ಕೂ ಮಸೀದಿ ವಾಸ್ತುಶಿಲ್ಪಕ್ಕೂ ಸಾಮ್ಯತೆ!

ಮಂಗಳೂರಿನಲ್ಲಿ 48 ಲಿಂಗಾಯತ ಮಠಗಳ ಪೈಕಿ 21 ಮಠಗಳು ನಾಶವಾಗಿವೆ. ಇದೇ ದಾಳಿಗೆ ತುತ್ತಾಗಿ ಮಸೀದಿ ಜಾಗದ ಲಿಂಗಾಯತ ಮಠವೂ ನಾಶವಾದ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ನವೀಕರಣ ವೇಳೆ ಮಳಲಿ ಮಸೀದಿಯಲ್ಲಿ ಪತ್ತೆಯಾಗಿದ್ದು ಲಿಂಗಾಯತ ಸಂಪ್ರದಾಯಕ್ಕೆ ಸೇರಿದ ಶೈವ ಮಠ ಎಂಬ ಚರ್ಚೆಗೆ ಗುರುಪುರದ ಜಂಗಮ ಲಿಂಗಾಯತ ಮಠದ ರುದ್ರಮುನಿ ಸ್ವಾಮೀಜಿ ಈ ಸ್ಪಷ್ಟನೆ ನೀಡುತ್ತಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more