Karwar: ಸೀಬರ್ಡ್ ನೌಕಾನೆಲೆಗೆ ಭೂಮಿಕೊಟ್ಟ ಹಾಲಕ್ಕಿ ಒಕ್ಕಲಿಗರಿಗಿಲ್ಲ ಉದ್ಯೋಗ..!

Karwar: ಸೀಬರ್ಡ್ ನೌಕಾನೆಲೆಗೆ ಭೂಮಿಕೊಟ್ಟ ಹಾಲಕ್ಕಿ ಒಕ್ಕಲಿಗರಿಗಿಲ್ಲ ಉದ್ಯೋಗ..!

Suvarna News   | Asianet News
Published : Jan 30, 2022, 11:09 AM IST

*  ಸಂತ್ರಸ್ತರಿಗೆ ಉದ್ಯೋಗದ ಭರವಸೆ ಕೊಟ್ಟು ಮಾತು ತಪ್ಪಿಸರುವ ಸರ್ಕಾರ
*  ಪರಿಶಿಷ್ಟ ಪಂಗಡಕ್ಕೂ ಸೇರಿಸಿಲ್ಲ, ಉದ್ಯೋಗವನ್ನೂ ಕಲ್ಪಿಸದ ಸರ್ಕಾರ
*  ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಸಂತ್ರಸ್ತರು
 

ಕಾರವಾರ(ಜ.30):  ಅದು ದೇಶದ ಅತೀ ದೊಡ್ಡ ಸೀಬರ್ಡ್ ನೌಕಾನೆಲೆ. ಅದರ ನಿರ್ಮಾಣಕ್ಕೆ ಹಾಲಕ್ಕಿ ಒಕ್ಕಲಿಗರ ಸಮುದಾಯ ಸೇರಿದಂತೆ  ಹಲವರು ಸಾವಿರಾರು ಎಕರೆ ಜಮೀನು ಬಿಟ್ಟಕೊಟ್ಟಿದ್ದರು.‌ ಜಮೀನು ಬಿಟ್ಟು ಕೊಡುವ ವೇಳೆ ಸರಕಾರ ಸಂತ್ರಸ್ತರಿಗೆ ಉದ್ಯೋಗದ ಭರವಸೆ ನೀಡಿತ್ತಾದ್ರೂ, ಪ್ರಸ್ತುತ, ಸಂತ್ರಸ್ತರಿಗೆ ಉದ್ಯೋಗದಲ್ಲಿ ಮೊದಲ ಪ್ರಾಶಸ್ತ್ಯ ನೀಡದೆ ಇತರ ರಾಜ್ಯದ ಜನರಿಗೆ ಮಣೆ ಹಾಕುತ್ತಿದೆ ಎಂಬ ಆರೋಪ ಎದುರಾಗಿದೆ. ಒಂದೆಡೆ ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿಲ್ಲ, ಮತ್ತೊಂದೆಡೆ ಉದ್ಯೋಗ ವ್ಯವಸ್ಥೆಯನ್ನೂ ಮಾಡಿಕೊಡದ ಕಾರಣ ಹಾಲಕ್ಕಿ ಒಕ್ಕಲಿಗರ ಸಮುದಾಯದ ಜನರು ಬಹಿರಂಗವಾಗಿ ತಮ್ಮ ಅಸಮಾಧಾನ ತೋರಿದ್ದಾರೆ. 

ಇಷ್ಟು ದಿನಗಳ ಕಾಲ ತಮಗೆ ಉದ್ಯೋಗ ದೊರೆಯುತ್ತದೆ ಎಂದು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದ ಸಂತ್ರಸ್ತರು ತಮಗಾದ ಮೋಸದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದು, ಉದ್ಯೋಗಕ್ಕಾಗಿ ಇದೀಗ ಹಾಲಕ್ಕಿ ಸಮುದಾಯದ ಜನರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಒಂದೆಡೆ ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆಸಿದರೂ ಯಾವುದೇ ಫಲ ದೊರಕಿಲ್ಲ. ಮತ್ತೊಂದೆಡೆ‌ ಈ ಸಂತ್ರಸ್ತರಿಗೆ ಈವರೆಗೂ ಉದ್ಯೋಗ ವ್ಯವಸ್ಥೆಯನ್ನು ಒದಗಿಸದ ಕಾರಣ ಹಾಲಕ್ಕಿ ಸಮುದಾಯದ ಜನರು ನೋವು ವ್ಯಕ್ತಪಡಿಸಿದ್ದಾರೆ. 

Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

ಹಾಲಕ್ಕಿ ಜನಾಂಗವನ್ನು ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ದೊಡ್ಡ ಹೋರಾಟ ನಡೆದ ಪರಿಣಾಮ ರಾಜ್ಯ ಸರ್ಕಾರ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಈ ಬಗ್ಗೆ ಹಲವರು ಮುಖಂಡರು ದೆಹಲಿಗೆ ತೆರಳಿ ಐದಾರು ವರ್ಷದಿಂದ ಒತ್ತಡ ಹೇರಿದ್ದರೂ ಇಂದಿಗೂ ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರ್ಪಡೆಯಾಗಿಲ್ಲ. ಈ ನಿಟ್ಟಿನಲ್ಲಿ ಇದೇ ಸಮುದಾಯಕ್ಕೆ ಸೇರಿದ ಜಾನಪದ ಕೋಗಿಲೆ ಖ್ಯಾತಿಯ ನಾಡೋಜ ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ಕೂಡಾ ಹೋರಾಟಕ್ಕೆ ಕೈಜೋಡಿಸಿದ್ದರು. ಕಳೆದ 2000ನೇ ಇಸವಿಯಿಂದಲೂ ನಡೆಸಿಕೊಂಡು ಬರುತ್ತಿರುವ ಹೋರಾಟಕ್ಕೆ ಯಾವುದೇ ಉತ್ತರ‌ ದೊರೆಯದ ಕಾರಣ ಕೇಂದ್ರ ಸರ್ಕಾರ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಸ್ ಮಾಡೋದಾಗಿ ತಿಳಿಸಿದ್ದರು. ಆದರೂ, ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದ ಈ ಸಮುದಾಯಕ್ಕೆ ನ್ಯಾಯ ಮಾತ್ರ ಸಿಕ್ಕಿಲ್ಲ. 

ಉದ್ಯೋಗಕ್ಕಾಗಿ ಸತತ 20 ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದೇವೆ ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಸುಮ್ಮನೆ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ. ಸರ್ಕಾರ ಎಚ್ಚೆತ್ತು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ನಮ್ಮ ಹಕ್ಕಿಗಾಗಿ ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಸಂತ್ರಸ್ತರು ಎಚ್ಚರಿಸಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more