ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

Published : Nov 17, 2023, 11:11 AM IST

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ, ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. ಹಾಸನಾಂಬೆ ಉತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಆದಾಯ ಹರಿದುಬಂದಿದೆ.
 

ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆ ಜಾತ್ರಾ( Hasanamba) ಮಹೋತ್ಸವಕ್ಕೆ ತೆರೆಬಿದ್ದಿದೆ. ನವೆಂಬರ್ 02 ರಿಂದ 14ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ 14.20 ಲಕ್ಷ ಜನ ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಜಾತ್ರಾ ಮಹೋತ್ಸವ ವೇಳೆ ಹಾಸನಾಂಬೆಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ. ಭಕ್ತರು ಹರಕೆ‌ ರೂಪದಲ್ಲಿ ಹುಂಡಿಗೆ ಹಾಕಿದ್ದ ಹಣವನ್ನ ಎಣಿಕೆ ಮಾಡಲಾಯ್ತು. 
ಈಡೀ ದಿನ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. 2.5 ಕೋಟಿ ಹಣ ಹುಂಡಿಯಿಂದ ಬಂದಿದ್ದು, 20 ಲಕ್ಷ ಹಣ ಇ - ಹುಂಡಿಯಿಂದ ಬಂದಿದೆ. ಎಲ್ಲಾ ಮೂಲಗಳಿಂದ ಬರೋಬ್ಬರಿ 8.72 ಕೋಟಿ ಆದಾಯ ಹರಿದುಬಂದಿದೆ. 8.72 ಕೋಟಿ ಆದಾಯ ಬಂದಿದ್ದು, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಆದಾಯ ದುಪ್ಪಟ್ಟಾಗಿದೆ. ಇನ್ನು ದೇವಿ ದರ್ಶನದ ಟಿಕೆಟ್(Ticket), ಪ್ರಸಾದದಿಂದ ಬರೋಬ್ಬರಿ 6.15 ಕೋಟಿ ಆದಾಯ(Income) ಬಂದಿದೆ.‌ 1000ರೂ. ಟಿಕೆಟ್ನಿಂದ 3.09 ಕೋಟಿ, 300ರೂ. ಟಿಕೆಟ್ನಿಂದ 2.35 ಕೋಟಿ ಹಾಗೂ ಲಾಡುಪ್ರಸಾದದಿಂದ 70.23 ಲಕ್ಷ ಆದಾಯ ಬಂದಿದೆ. ಹಾಸನಾಂಬ ದೇಗುಲ(Hasanamba temple) ಮುಜರಾಯಿ ಇಲಾಖೆಗೆ ಸೇರೋದ್ರಿಂದ ಎಲ್ಲಾ ಹಣವನ್ನ ದೇವಾಲಯದ ಖಾತೆಗೆ ವರ್ಗಾಯಿಸಲಾಗುತ್ತದೆ. ಭಕ್ತರು ಕಾಣಿಕೆ ರೂಪದಲ್ಲಿ ನೀಡಿರೋ ಈ ಹಣವನ್ನ ದೇವಾಲಯದ ಅಭಿವೃದ್ಧಿಗೆ ಬಳಸಲಾಗುತ್ತದೆ. ಹಾಸನಾಂಬ ಜಾತ್ರಾ ಮಹೋತ್ಸವದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಆದಾಯ ಸಂಗ್ರಹವಾಗಿದೆ. ಕಳೆದ ಜಾತ್ರಾ ಮಹೋತ್ಸವಗಳಿಗೆ ಹೋಲಿಕೆ ಮಾಡಿದ್ರೆ ಆದಾಯ ದುಪ್ಪಟ್ಟಾಗಿದೆ. 

ಇದನ್ನೂ ವೀಕ್ಷಿಸಿ:  ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more