ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

Published : Nov 17, 2023, 11:11 AM IST

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ, ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. ಹಾಸನಾಂಬೆ ಉತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಆದಾಯ ಹರಿದುಬಂದಿದೆ.
 

ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆ ಜಾತ್ರಾ( Hasanamba) ಮಹೋತ್ಸವಕ್ಕೆ ತೆರೆಬಿದ್ದಿದೆ. ನವೆಂಬರ್ 02 ರಿಂದ 14ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ 14.20 ಲಕ್ಷ ಜನ ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಜಾತ್ರಾ ಮಹೋತ್ಸವ ವೇಳೆ ಹಾಸನಾಂಬೆಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ. ಭಕ್ತರು ಹರಕೆ‌ ರೂಪದಲ್ಲಿ ಹುಂಡಿಗೆ ಹಾಕಿದ್ದ ಹಣವನ್ನ ಎಣಿಕೆ ಮಾಡಲಾಯ್ತು. 
ಈಡೀ ದಿನ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. 2.5 ಕೋಟಿ ಹಣ ಹುಂಡಿಯಿಂದ ಬಂದಿದ್ದು, 20 ಲಕ್ಷ ಹಣ ಇ - ಹುಂಡಿಯಿಂದ ಬಂದಿದೆ. ಎಲ್ಲಾ ಮೂಲಗಳಿಂದ ಬರೋಬ್ಬರಿ 8.72 ಕೋಟಿ ಆದಾಯ ಹರಿದುಬಂದಿದೆ. 8.72 ಕೋಟಿ ಆದಾಯ ಬಂದಿದ್ದು, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಆದಾಯ ದುಪ್ಪಟ್ಟಾಗಿದೆ. ಇನ್ನು ದೇವಿ ದರ್ಶನದ ಟಿಕೆಟ್(Ticket), ಪ್ರಸಾದದಿಂದ ಬರೋಬ್ಬರಿ 6.15 ಕೋಟಿ ಆದಾಯ(Income) ಬಂದಿದೆ.‌ 1000ರೂ. ಟಿಕೆಟ್ನಿಂದ 3.09 ಕೋಟಿ, 300ರೂ. ಟಿಕೆಟ್ನಿಂದ 2.35 ಕೋಟಿ ಹಾಗೂ ಲಾಡುಪ್ರಸಾದದಿಂದ 70.23 ಲಕ್ಷ ಆದಾಯ ಬಂದಿದೆ. ಹಾಸನಾಂಬ ದೇಗುಲ(Hasanamba temple) ಮುಜರಾಯಿ ಇಲಾಖೆಗೆ ಸೇರೋದ್ರಿಂದ ಎಲ್ಲಾ ಹಣವನ್ನ ದೇವಾಲಯದ ಖಾತೆಗೆ ವರ್ಗಾಯಿಸಲಾಗುತ್ತದೆ. ಭಕ್ತರು ಕಾಣಿಕೆ ರೂಪದಲ್ಲಿ ನೀಡಿರೋ ಈ ಹಣವನ್ನ ದೇವಾಲಯದ ಅಭಿವೃದ್ಧಿಗೆ ಬಳಸಲಾಗುತ್ತದೆ. ಹಾಸನಾಂಬ ಜಾತ್ರಾ ಮಹೋತ್ಸವದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಆದಾಯ ಸಂಗ್ರಹವಾಗಿದೆ. ಕಳೆದ ಜಾತ್ರಾ ಮಹೋತ್ಸವಗಳಿಗೆ ಹೋಲಿಕೆ ಮಾಡಿದ್ರೆ ಆದಾಯ ದುಪ್ಪಟ್ಟಾಗಿದೆ. 

ಇದನ್ನೂ ವೀಕ್ಷಿಸಿ:  ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more