ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

Published : Nov 17, 2023, 11:11 AM IST

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ, ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. ಹಾಸನಾಂಬೆ ಉತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಆದಾಯ ಹರಿದುಬಂದಿದೆ.
 

ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆ ಜಾತ್ರಾ( Hasanamba) ಮಹೋತ್ಸವಕ್ಕೆ ತೆರೆಬಿದ್ದಿದೆ. ನವೆಂಬರ್ 02 ರಿಂದ 14ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ 14.20 ಲಕ್ಷ ಜನ ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಜಾತ್ರಾ ಮಹೋತ್ಸವ ವೇಳೆ ಹಾಸನಾಂಬೆಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ. ಭಕ್ತರು ಹರಕೆ‌ ರೂಪದಲ್ಲಿ ಹುಂಡಿಗೆ ಹಾಕಿದ್ದ ಹಣವನ್ನ ಎಣಿಕೆ ಮಾಡಲಾಯ್ತು. 
ಈಡೀ ದಿನ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. 2.5 ಕೋಟಿ ಹಣ ಹುಂಡಿಯಿಂದ ಬಂದಿದ್ದು, 20 ಲಕ್ಷ ಹಣ ಇ - ಹುಂಡಿಯಿಂದ ಬಂದಿದೆ. ಎಲ್ಲಾ ಮೂಲಗಳಿಂದ ಬರೋಬ್ಬರಿ 8.72 ಕೋಟಿ ಆದಾಯ ಹರಿದುಬಂದಿದೆ. 8.72 ಕೋಟಿ ಆದಾಯ ಬಂದಿದ್ದು, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಆದಾಯ ದುಪ್ಪಟ್ಟಾಗಿದೆ. ಇನ್ನು ದೇವಿ ದರ್ಶನದ ಟಿಕೆಟ್(Ticket), ಪ್ರಸಾದದಿಂದ ಬರೋಬ್ಬರಿ 6.15 ಕೋಟಿ ಆದಾಯ(Income) ಬಂದಿದೆ.‌ 1000ರೂ. ಟಿಕೆಟ್ನಿಂದ 3.09 ಕೋಟಿ, 300ರೂ. ಟಿಕೆಟ್ನಿಂದ 2.35 ಕೋಟಿ ಹಾಗೂ ಲಾಡುಪ್ರಸಾದದಿಂದ 70.23 ಲಕ್ಷ ಆದಾಯ ಬಂದಿದೆ. ಹಾಸನಾಂಬ ದೇಗುಲ(Hasanamba temple) ಮುಜರಾಯಿ ಇಲಾಖೆಗೆ ಸೇರೋದ್ರಿಂದ ಎಲ್ಲಾ ಹಣವನ್ನ ದೇವಾಲಯದ ಖಾತೆಗೆ ವರ್ಗಾಯಿಸಲಾಗುತ್ತದೆ. ಭಕ್ತರು ಕಾಣಿಕೆ ರೂಪದಲ್ಲಿ ನೀಡಿರೋ ಈ ಹಣವನ್ನ ದೇವಾಲಯದ ಅಭಿವೃದ್ಧಿಗೆ ಬಳಸಲಾಗುತ್ತದೆ. ಹಾಸನಾಂಬ ಜಾತ್ರಾ ಮಹೋತ್ಸವದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಆದಾಯ ಸಂಗ್ರಹವಾಗಿದೆ. ಕಳೆದ ಜಾತ್ರಾ ಮಹೋತ್ಸವಗಳಿಗೆ ಹೋಲಿಕೆ ಮಾಡಿದ್ರೆ ಆದಾಯ ದುಪ್ಪಟ್ಟಾಗಿದೆ. 

ಇದನ್ನೂ ವೀಕ್ಷಿಸಿ:  ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more