ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

Published : Nov 17, 2023, 11:11 AM IST

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ, ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. ಹಾಸನಾಂಬೆ ಉತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಆದಾಯ ಹರಿದುಬಂದಿದೆ.
 

ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆ ಜಾತ್ರಾ( Hasanamba) ಮಹೋತ್ಸವಕ್ಕೆ ತೆರೆಬಿದ್ದಿದೆ. ನವೆಂಬರ್ 02 ರಿಂದ 14ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ 14.20 ಲಕ್ಷ ಜನ ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಜಾತ್ರಾ ಮಹೋತ್ಸವ ವೇಳೆ ಹಾಸನಾಂಬೆಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ. ಭಕ್ತರು ಹರಕೆ‌ ರೂಪದಲ್ಲಿ ಹುಂಡಿಗೆ ಹಾಕಿದ್ದ ಹಣವನ್ನ ಎಣಿಕೆ ಮಾಡಲಾಯ್ತು. 
ಈಡೀ ದಿನ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. 2.5 ಕೋಟಿ ಹಣ ಹುಂಡಿಯಿಂದ ಬಂದಿದ್ದು, 20 ಲಕ್ಷ ಹಣ ಇ - ಹುಂಡಿಯಿಂದ ಬಂದಿದೆ. ಎಲ್ಲಾ ಮೂಲಗಳಿಂದ ಬರೋಬ್ಬರಿ 8.72 ಕೋಟಿ ಆದಾಯ ಹರಿದುಬಂದಿದೆ. 8.72 ಕೋಟಿ ಆದಾಯ ಬಂದಿದ್ದು, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಆದಾಯ ದುಪ್ಪಟ್ಟಾಗಿದೆ. ಇನ್ನು ದೇವಿ ದರ್ಶನದ ಟಿಕೆಟ್(Ticket), ಪ್ರಸಾದದಿಂದ ಬರೋಬ್ಬರಿ 6.15 ಕೋಟಿ ಆದಾಯ(Income) ಬಂದಿದೆ.‌ 1000ರೂ. ಟಿಕೆಟ್ನಿಂದ 3.09 ಕೋಟಿ, 300ರೂ. ಟಿಕೆಟ್ನಿಂದ 2.35 ಕೋಟಿ ಹಾಗೂ ಲಾಡುಪ್ರಸಾದದಿಂದ 70.23 ಲಕ್ಷ ಆದಾಯ ಬಂದಿದೆ. ಹಾಸನಾಂಬ ದೇಗುಲ(Hasanamba temple) ಮುಜರಾಯಿ ಇಲಾಖೆಗೆ ಸೇರೋದ್ರಿಂದ ಎಲ್ಲಾ ಹಣವನ್ನ ದೇವಾಲಯದ ಖಾತೆಗೆ ವರ್ಗಾಯಿಸಲಾಗುತ್ತದೆ. ಭಕ್ತರು ಕಾಣಿಕೆ ರೂಪದಲ್ಲಿ ನೀಡಿರೋ ಈ ಹಣವನ್ನ ದೇವಾಲಯದ ಅಭಿವೃದ್ಧಿಗೆ ಬಳಸಲಾಗುತ್ತದೆ. ಹಾಸನಾಂಬ ಜಾತ್ರಾ ಮಹೋತ್ಸವದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಆದಾಯ ಸಂಗ್ರಹವಾಗಿದೆ. ಕಳೆದ ಜಾತ್ರಾ ಮಹೋತ್ಸವಗಳಿಗೆ ಹೋಲಿಕೆ ಮಾಡಿದ್ರೆ ಆದಾಯ ದುಪ್ಪಟ್ಟಾಗಿದೆ. 

ಇದನ್ನೂ ವೀಕ್ಷಿಸಿ:  ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more