ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

ಶಕ್ತಿ ದೇವತೆ ಹಾಸನಾಂಬೆಗೆ ಭಕ್ತರ ಭರಪೂರ ಕಾಣಿಕೆ: 14 ದಿನದಲ್ಲಿ ಹರಿದುಬಂದ ಆದಾಯ ಎಷ್ಟು ?

Published : Nov 17, 2023, 11:11 AM IST

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ, ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. ಹಾಸನಾಂಬೆ ಉತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಆದಾಯ ಹರಿದುಬಂದಿದೆ.
 

ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆ ಜಾತ್ರಾ( Hasanamba) ಮಹೋತ್ಸವಕ್ಕೆ ತೆರೆಬಿದ್ದಿದೆ. ನವೆಂಬರ್ 02 ರಿಂದ 14ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ 14.20 ಲಕ್ಷ ಜನ ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಜಾತ್ರಾ ಮಹೋತ್ಸವ ವೇಳೆ ಹಾಸನಾಂಬೆಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ. ಭಕ್ತರು ಹರಕೆ‌ ರೂಪದಲ್ಲಿ ಹುಂಡಿಗೆ ಹಾಕಿದ್ದ ಹಣವನ್ನ ಎಣಿಕೆ ಮಾಡಲಾಯ್ತು. 
ಈಡೀ ದಿನ ಹುಂಡಿ ಹಣವನ್ನ ಎಣಿಕೆ ಮಾಡಲಾಯಿತು. 2.5 ಕೋಟಿ ಹಣ ಹುಂಡಿಯಿಂದ ಬಂದಿದ್ದು, 20 ಲಕ್ಷ ಹಣ ಇ - ಹುಂಡಿಯಿಂದ ಬಂದಿದೆ. ಎಲ್ಲಾ ಮೂಲಗಳಿಂದ ಬರೋಬ್ಬರಿ 8.72 ಕೋಟಿ ಆದಾಯ ಹರಿದುಬಂದಿದೆ. 8.72 ಕೋಟಿ ಆದಾಯ ಬಂದಿದ್ದು, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಆದಾಯ ದುಪ್ಪಟ್ಟಾಗಿದೆ. ಇನ್ನು ದೇವಿ ದರ್ಶನದ ಟಿಕೆಟ್(Ticket), ಪ್ರಸಾದದಿಂದ ಬರೋಬ್ಬರಿ 6.15 ಕೋಟಿ ಆದಾಯ(Income) ಬಂದಿದೆ.‌ 1000ರೂ. ಟಿಕೆಟ್ನಿಂದ 3.09 ಕೋಟಿ, 300ರೂ. ಟಿಕೆಟ್ನಿಂದ 2.35 ಕೋಟಿ ಹಾಗೂ ಲಾಡುಪ್ರಸಾದದಿಂದ 70.23 ಲಕ್ಷ ಆದಾಯ ಬಂದಿದೆ. ಹಾಸನಾಂಬ ದೇಗುಲ(Hasanamba temple) ಮುಜರಾಯಿ ಇಲಾಖೆಗೆ ಸೇರೋದ್ರಿಂದ ಎಲ್ಲಾ ಹಣವನ್ನ ದೇವಾಲಯದ ಖಾತೆಗೆ ವರ್ಗಾಯಿಸಲಾಗುತ್ತದೆ. ಭಕ್ತರು ಕಾಣಿಕೆ ರೂಪದಲ್ಲಿ ನೀಡಿರೋ ಈ ಹಣವನ್ನ ದೇವಾಲಯದ ಅಭಿವೃದ್ಧಿಗೆ ಬಳಸಲಾಗುತ್ತದೆ. ಹಾಸನಾಂಬ ಜಾತ್ರಾ ಮಹೋತ್ಸವದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಆದಾಯ ಸಂಗ್ರಹವಾಗಿದೆ. ಕಳೆದ ಜಾತ್ರಾ ಮಹೋತ್ಸವಗಳಿಗೆ ಹೋಲಿಕೆ ಮಾಡಿದ್ರೆ ಆದಾಯ ದುಪ್ಪಟ್ಟಾಗಿದೆ. 

ಇದನ್ನೂ ವೀಕ್ಷಿಸಿ:  ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more