ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

Published : Oct 04, 2022, 05:01 PM IST

Paresh Mesta Case: ಎಲ್ಲಾ ಜನಪ್ರತಿನಿಧಿಗಳು ಪರೇಶ್ ಮೇಸ್ತಾ ಪ್ರಕರಣವನ್ನು ಪ್ರಚಾರಕ್ಕೆ ಬಳಸಿಕೊಂಡರಷ್ಟೇ ಎಂದು ತಂದೆ ಕಮಲಾಕರ ಮೇಸ್ತಾ ಹೇಳಿದ್ದಾರೆ  

ಕಾರವಾರ (ಅ.4) : ಹೊನ್ನಾವರದ ಯುವಕ ಪರೇಶ್‌ ಮೇಸ್ತಾನದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ನ್ಯಾಯಾಲಯಕ್ಕೆ ಸೋಮವಾರ ವರದಿ ಸಲ್ಲಿಸಿದೆ. ಸಿಬಿಐ ವರದಿಗೆ ಹಿಂದೂ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಪರೇಶ್‌ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಕೂಡ ಸಿಬಿಐ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಸಿಬಿಐ ವರದಿ ಮೇಲೆ ಅಸಮಾಧಾನವಿದೆ, ಎಲ್ಲಾ ಜನಪ್ರತಿನಿಧಿಗಳು ಪರೇಶ್ ಮೇಸ್ತಾ ಪ್ರಕರಣವನ್ನು ಬಳಸಿಕೊಂಡರಷ್ಟೇ, ಸಿಬಿಐ ವರದಿಯ ಬಳಿಕ ಯಾವ ಜನಪ್ರತಿನಿಧಿಯೂ ಕರೆ ಮಾಡಿ ಮಾತನಾಡಿಸಿಲ್ಲ, ಯಾವ ಪಕ್ಷದಿಂದಲೂ‌ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ. 

"ಮುಂದಿನ ದಿನಗಳಲ್ಲಿ ಎನ್‌ಐಎಗೆ ಈ ಪ್ರಕರಣ ನೀಡಲು ಒತ್ತಾಯ ಮಾಡುವ ಬಗ್ಗೆ ಚಿಂತನೆ ನಡೆಸ್ತೇನೆ, ನನ್ನ ಮಗನ ಕೊಲೆಯಾದ ನಂತರ ಸಾಕ್ಷ್ಯ ನಾಶ ಮಾಡಲಾಗಿದೆ, ಅವನನ್ನು ಹೊಡೆದು ಕೊಲೆ ಮಾಡಿಯೇ ಕೆರೆಗೆ ಬಿಸಾಕಿದ್ದಾರೆ, ಮಗನನ್ನು ಕೊಲೆ ಮಾಡಿದ ದಿನವೇ ಸ್ಥಳೀಯ ದೇವಸ್ಥಾನ ಹಾಗೂ ಜ್ಯುವೆಲ್ಲರಿ ಶಾಪ್‌ನ ಸಿಸಿ ಕ್ಯಾಮೆರಾ ಹಾಳಾಗಿದೆ,  ನನ್ನ‌ ಮಗನ ಕೊಲೆ ಪೂರ್ವ ನಿಯೋಜಿತ ಕೃತ್ಯ, ಪೊಲೀಸರು ಶಾಮೀಲಾಗಿದ್ದಾರೆ,  ನನ್ನ ಮಗನಿಗೆ ಈಜಲು ಗೊತ್ತಿದೆ, ಕೆರೆಯಲ್ಲಿ ಮುಳುಗಿ ಸಾಯಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ. 

ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

"ಬಿಜೆಪಿ ಸರ್ಕಾರದ ಮೇಲೂ ನನಗೆ ಅಸಮಾಧಾನವಿದೆ, ಬಿಜೆಪಿಯವರು ಕೂಡಾ ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡರು, ಸರಕಾರದಿಂದ 5 ಲಕ್ಷ ರೂ. ಪರಿಹಾರ ಸಿಕ್ಕಿದೆ ಹೊರತು ಬೇರೇನೂ ಸಿಕ್ಕಿಲ್ಲ,  ಬಿಜೆಪಿ ಸರಕಾರದಿಂದ ಯಾವುದೇ ಆರ್ಥಿಕ ಸಹಕಾರ ದೊರಕಿಲ್ಲ, ಪ್ರಚಾರಕ್ಕೆ ಮಾತ್ರ ನಮ್ಮನ್ನು ಬಳಸಿಕೊಂಡಿದ್ದಾರೆ" ಎಂದು ಪರೇಶ್‌ ಮೇಸ್ತಾ ತಂದೆ ನೋವು‌ ತೋಡಿಕೊಂಡಿದ್ದಾರೆ 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more