ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

Published : Oct 04, 2022, 05:01 PM IST

Paresh Mesta Case: ಎಲ್ಲಾ ಜನಪ್ರತಿನಿಧಿಗಳು ಪರೇಶ್ ಮೇಸ್ತಾ ಪ್ರಕರಣವನ್ನು ಪ್ರಚಾರಕ್ಕೆ ಬಳಸಿಕೊಂಡರಷ್ಟೇ ಎಂದು ತಂದೆ ಕಮಲಾಕರ ಮೇಸ್ತಾ ಹೇಳಿದ್ದಾರೆ  

ಕಾರವಾರ (ಅ.4) : ಹೊನ್ನಾವರದ ಯುವಕ ಪರೇಶ್‌ ಮೇಸ್ತಾನದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ನ್ಯಾಯಾಲಯಕ್ಕೆ ಸೋಮವಾರ ವರದಿ ಸಲ್ಲಿಸಿದೆ. ಸಿಬಿಐ ವರದಿಗೆ ಹಿಂದೂ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಪರೇಶ್‌ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಕೂಡ ಸಿಬಿಐ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಸಿಬಿಐ ವರದಿ ಮೇಲೆ ಅಸಮಾಧಾನವಿದೆ, ಎಲ್ಲಾ ಜನಪ್ರತಿನಿಧಿಗಳು ಪರೇಶ್ ಮೇಸ್ತಾ ಪ್ರಕರಣವನ್ನು ಬಳಸಿಕೊಂಡರಷ್ಟೇ, ಸಿಬಿಐ ವರದಿಯ ಬಳಿಕ ಯಾವ ಜನಪ್ರತಿನಿಧಿಯೂ ಕರೆ ಮಾಡಿ ಮಾತನಾಡಿಸಿಲ್ಲ, ಯಾವ ಪಕ್ಷದಿಂದಲೂ‌ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ. 

"ಮುಂದಿನ ದಿನಗಳಲ್ಲಿ ಎನ್‌ಐಎಗೆ ಈ ಪ್ರಕರಣ ನೀಡಲು ಒತ್ತಾಯ ಮಾಡುವ ಬಗ್ಗೆ ಚಿಂತನೆ ನಡೆಸ್ತೇನೆ, ನನ್ನ ಮಗನ ಕೊಲೆಯಾದ ನಂತರ ಸಾಕ್ಷ್ಯ ನಾಶ ಮಾಡಲಾಗಿದೆ, ಅವನನ್ನು ಹೊಡೆದು ಕೊಲೆ ಮಾಡಿಯೇ ಕೆರೆಗೆ ಬಿಸಾಕಿದ್ದಾರೆ, ಮಗನನ್ನು ಕೊಲೆ ಮಾಡಿದ ದಿನವೇ ಸ್ಥಳೀಯ ದೇವಸ್ಥಾನ ಹಾಗೂ ಜ್ಯುವೆಲ್ಲರಿ ಶಾಪ್‌ನ ಸಿಸಿ ಕ್ಯಾಮೆರಾ ಹಾಳಾಗಿದೆ,  ನನ್ನ‌ ಮಗನ ಕೊಲೆ ಪೂರ್ವ ನಿಯೋಜಿತ ಕೃತ್ಯ, ಪೊಲೀಸರು ಶಾಮೀಲಾಗಿದ್ದಾರೆ,  ನನ್ನ ಮಗನಿಗೆ ಈಜಲು ಗೊತ್ತಿದೆ, ಕೆರೆಯಲ್ಲಿ ಮುಳುಗಿ ಸಾಯಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ. 

ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

"ಬಿಜೆಪಿ ಸರ್ಕಾರದ ಮೇಲೂ ನನಗೆ ಅಸಮಾಧಾನವಿದೆ, ಬಿಜೆಪಿಯವರು ಕೂಡಾ ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡರು, ಸರಕಾರದಿಂದ 5 ಲಕ್ಷ ರೂ. ಪರಿಹಾರ ಸಿಕ್ಕಿದೆ ಹೊರತು ಬೇರೇನೂ ಸಿಕ್ಕಿಲ್ಲ,  ಬಿಜೆಪಿ ಸರಕಾರದಿಂದ ಯಾವುದೇ ಆರ್ಥಿಕ ಸಹಕಾರ ದೊರಕಿಲ್ಲ, ಪ್ರಚಾರಕ್ಕೆ ಮಾತ್ರ ನಮ್ಮನ್ನು ಬಳಸಿಕೊಂಡಿದ್ದಾರೆ" ಎಂದು ಪರೇಶ್‌ ಮೇಸ್ತಾ ತಂದೆ ನೋವು‌ ತೋಡಿಕೊಂಡಿದ್ದಾರೆ 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more