ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

Published : Oct 04, 2022, 05:01 PM IST

Paresh Mesta Case: ಎಲ್ಲಾ ಜನಪ್ರತಿನಿಧಿಗಳು ಪರೇಶ್ ಮೇಸ್ತಾ ಪ್ರಕರಣವನ್ನು ಪ್ರಚಾರಕ್ಕೆ ಬಳಸಿಕೊಂಡರಷ್ಟೇ ಎಂದು ತಂದೆ ಕಮಲಾಕರ ಮೇಸ್ತಾ ಹೇಳಿದ್ದಾರೆ  

ಕಾರವಾರ (ಅ.4) : ಹೊನ್ನಾವರದ ಯುವಕ ಪರೇಶ್‌ ಮೇಸ್ತಾನದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ನ್ಯಾಯಾಲಯಕ್ಕೆ ಸೋಮವಾರ ವರದಿ ಸಲ್ಲಿಸಿದೆ. ಸಿಬಿಐ ವರದಿಗೆ ಹಿಂದೂ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಪರೇಶ್‌ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಕೂಡ ಸಿಬಿಐ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಸಿಬಿಐ ವರದಿ ಮೇಲೆ ಅಸಮಾಧಾನವಿದೆ, ಎಲ್ಲಾ ಜನಪ್ರತಿನಿಧಿಗಳು ಪರೇಶ್ ಮೇಸ್ತಾ ಪ್ರಕರಣವನ್ನು ಬಳಸಿಕೊಂಡರಷ್ಟೇ, ಸಿಬಿಐ ವರದಿಯ ಬಳಿಕ ಯಾವ ಜನಪ್ರತಿನಿಧಿಯೂ ಕರೆ ಮಾಡಿ ಮಾತನಾಡಿಸಿಲ್ಲ, ಯಾವ ಪಕ್ಷದಿಂದಲೂ‌ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ. 

"ಮುಂದಿನ ದಿನಗಳಲ್ಲಿ ಎನ್‌ಐಎಗೆ ಈ ಪ್ರಕರಣ ನೀಡಲು ಒತ್ತಾಯ ಮಾಡುವ ಬಗ್ಗೆ ಚಿಂತನೆ ನಡೆಸ್ತೇನೆ, ನನ್ನ ಮಗನ ಕೊಲೆಯಾದ ನಂತರ ಸಾಕ್ಷ್ಯ ನಾಶ ಮಾಡಲಾಗಿದೆ, ಅವನನ್ನು ಹೊಡೆದು ಕೊಲೆ ಮಾಡಿಯೇ ಕೆರೆಗೆ ಬಿಸಾಕಿದ್ದಾರೆ, ಮಗನನ್ನು ಕೊಲೆ ಮಾಡಿದ ದಿನವೇ ಸ್ಥಳೀಯ ದೇವಸ್ಥಾನ ಹಾಗೂ ಜ್ಯುವೆಲ್ಲರಿ ಶಾಪ್‌ನ ಸಿಸಿ ಕ್ಯಾಮೆರಾ ಹಾಳಾಗಿದೆ,  ನನ್ನ‌ ಮಗನ ಕೊಲೆ ಪೂರ್ವ ನಿಯೋಜಿತ ಕೃತ್ಯ, ಪೊಲೀಸರು ಶಾಮೀಲಾಗಿದ್ದಾರೆ,  ನನ್ನ ಮಗನಿಗೆ ಈಜಲು ಗೊತ್ತಿದೆ, ಕೆರೆಯಲ್ಲಿ ಮುಳುಗಿ ಸಾಯಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ. 

ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

"ಬಿಜೆಪಿ ಸರ್ಕಾರದ ಮೇಲೂ ನನಗೆ ಅಸಮಾಧಾನವಿದೆ, ಬಿಜೆಪಿಯವರು ಕೂಡಾ ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡರು, ಸರಕಾರದಿಂದ 5 ಲಕ್ಷ ರೂ. ಪರಿಹಾರ ಸಿಕ್ಕಿದೆ ಹೊರತು ಬೇರೇನೂ ಸಿಕ್ಕಿಲ್ಲ,  ಬಿಜೆಪಿ ಸರಕಾರದಿಂದ ಯಾವುದೇ ಆರ್ಥಿಕ ಸಹಕಾರ ದೊರಕಿಲ್ಲ, ಪ್ರಚಾರಕ್ಕೆ ಮಾತ್ರ ನಮ್ಮನ್ನು ಬಳಸಿಕೊಂಡಿದ್ದಾರೆ" ಎಂದು ಪರೇಶ್‌ ಮೇಸ್ತಾ ತಂದೆ ನೋವು‌ ತೋಡಿಕೊಂಡಿದ್ದಾರೆ 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more