ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

Published : Oct 06, 2023, 11:22 AM IST

ಹಸಿವು ಮುಕ್ತ ಕರ್ನಾಟಕಕ್ಕಾಗಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಹಳ್ಳಹಿಡಿದಿದೆ. ಹಸಿವು ನೀಗಿಸೋ ಬದಲು ಬಡವರ ನರಳಾಟಕ್ಕೆ ಕಾರಣವಾಗಿದೆ.
 

ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ(Siddaramaiah) ಸರ್ಕಾರ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್(Indira Canteen) ತೆರೆದಿದ್ರು.. 2013ರಲ್ಲಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಜಾರಿಗೆ ತಂದ   ಜನಪ್ರಿಯ ಯೋಜನೆಯಲ್ಲೊಂದಾದ ಇಂದಿರಾ ಕ್ಯಾಂಟೀನ್ಗೆ, 2023ರಲ್ಲಿ ಸಿದ್ದರಾಮಯ್ಯ ಅವಧಿಯಲ್ಲೇ  ಗ್ರಹಣ ಹಿಡಿದಿದೆ. ಇದು ಹಾವೇರಿ(Haveri) ಜಿಲ್ಲೆಯಲ್ಲಿ ಸಿದ್ದರಾಮಯ್ಯ ಕನಸಿನ ಯೋಜನೆ ಹಳ್ಳಹಿಡಿದ ಸ್ಟೋರಿ. ಸರಿಯಾದ ನಿರ್ವಹಣೆಯಿಲ್ಲದೇ ಜಿಲ್ಲೆಯಾದ್ಯಂತ ಬಹುತೇಕ ಇಂದಿರಾ ಕ್ಯಾಂಟೀನ್ ಕ್ಲೋಸ್ ಆಗಿವೆ. ಜಿಲ್ಲೆಯಲ್ಲಿ 3 ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಆದ್ರೆ, ಮೂರು ಕ್ಯಾಂಟೀನ್ಗಳು ಕ್ಲೋಸ್ ಆಗಿವೆ. ಹಾವೇರಿ ನಗರದ ಪಶು ಸಂಗೋಪನೆ ಇಲಾಖೆ ಕಚೇರಿ ಬಳಿಯೇ ಒಂದು ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಆರಂಭದ ಒಂದೆರಡು ವರ್ಷ ಜನರು ಸಾಲುಗಟ್ಟಿನಿಂತು ಟೋಕನ್ ಪಡೆದು ಊಟ, ಉಪಾಹಾರ ಮಾಡುತ್ತಿದ್ದರು. ಆದರೆ, ಬರುಬರುತ್ತ ಕ್ಯಾಂಟೀನ್ ಸರಿಯಾಗಿ ನಿರ್ವಹಣೆ ಮಾಡದೇ ಬಂದ್ ಮಾಡಿದ್ದಾರೆ. ಇದೀಗ ಈ ಕ್ಯಾಂಟೀನ್ ಕ್ಯಾಂಟೀನ್ ಪುಂಡ ಪೋಕರಿಗಳ ಅಡ್ಡೆಯಾಗಿದೆ. ಜಿಲ್ಲಾಸ್ಪತ್ರೆಗೆ ಹತ್ತಿರವೇ ಈ ಇಂದಿರಾ ಕ್ಯಾಂಟಿನ್ ಇದ್ದಿದ್ದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಆಸರೆಯಾಗಿತ್ತು. ನಗರದಲ್ಲಿನ ಬಡವರ ಹಸಿವನ್ನೂ ನೀಗಿಸುತ್ತಿದ್ದ ಕ್ಯಾಂಟೀನ್ ಈಗ ಕ್ಲೋಸ್ ಆಗಿದೆ. ಹಾವೇರಿ ಜಿಲ್ಲೆಗೆ ಒಟ್ಟು 8 ಇಂದಿರಾ ಕ್ಯಾಂಟೀನ್ಗಳನ್ನು ಮಂಜೂರು ಮಾಡಲಾಗಿದೆ. ಆದ್ರೆ, ಮೂರು ಕ್ಯಾಂಟೀನ್ಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ 5 ಕ್ಯಾಂಟೀನ್‌ಗಳಿಗೆ ಜಾಗ ಹುಡುಕೋದ್ರಲ್ಲೇ ಕಾಲ ತಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ರು ರಾಜ್ಯದ ಕ್ರೀಡಾಪಟುಗಳಿಗೆ ಸಿಗ್ತಿಲ್ವಾ ಬೆಂಬಲ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more