ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!