ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

Published : Jul 17, 2024, 04:56 PM IST

ರಣ ಮಳೆಗೆ ಅಪಾಯದ ಮಟ್ಟ ತಲುಪಿದ ಅಬ್ಬಿಕಲ್ಲು ಜಲಪಾತ..!  
ಶಿರೂರು ಬಳಿ ಗುಡ್ಡ ಕುಸಿತ.. ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್..!
ಡಿಪೋಗೆ ನುಗ್ಗಿದ ನೀರು..50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ..!

ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದೆ ಅದ್ರಲ್ಲೂ ಕರಾವಳಿ ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಊರಿಗೆ ಊರೇ ಜಲದಿಗ್ಭಂದನಕ್ಕೊಳಗಾಗಿದೆ. ಸೇತುವೆಗಳು ಜಲಾವೃತಗೊಂಡಿದ್ದು, ಹಲವು ಮನೆಗಳು ಕುಸಿದು ಬಿದ್ದಿವೆ. ಮಲೆನಾಡು ಭಾಗದಲ್ಲಿ ಸುರೀತಿರೋ ಪುನರ್ವಸು ಮಳೆಯ(Rain) ಅಟ್ಟಹಾಸಕ್ಕೆ ಸಂಪೂರ್ಣ ಕರಾವಳಿ ತತ್ತರಿಸಿದೆ. ಬತ್ತಿ ಹೋಗಿದ್ದ ನದಿಗಳು ಈಗ ರೌದ್ರಾವತಾರ ತಾಳಿದ್ದು, ಊರಿಗೆ ಊರೇ ಮುಳುಗಿ ಹೋಗಿದೆ. ಮಲೆನಾಡಲ್ಲಿ ಸುರಿಯುತ್ತಿರುವ ಭೀಕರ ಮಳೆಗೆ ಮಲೆನಾಡಿಗರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ತುಂಗಾ ,ಹೇಮಾವತಿ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಜೀವ ಕೈಯಲ್ಲಿಡಿದು ಬದುಕುವಂತಾಗಿದೆ. ನದಿಗಳ ನೀರು(Water) ಜಮೀನು ಹಾಗೂ ರಸ್ತೆಗಳಿಗೆ ನುಗ್ಗಿ ಸಂಪೂರ್ಣ ಜಲಾವೃತವಾಗಿದ್ರೆ. ಭಾರೀ ಪ್ರಮಾಣದಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಸಾವು..! ಅವರು ರೀಲ್ಸ್‌ನಲ್ಲೇ ಧರ್ಮದ ಪಾಠ ಮಾಡ್ತಿದ್ರು..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more