ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

Published : Jul 17, 2024, 04:56 PM IST

ರಣ ಮಳೆಗೆ ಅಪಾಯದ ಮಟ್ಟ ತಲುಪಿದ ಅಬ್ಬಿಕಲ್ಲು ಜಲಪಾತ..!  
ಶಿರೂರು ಬಳಿ ಗುಡ್ಡ ಕುಸಿತ.. ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್..!
ಡಿಪೋಗೆ ನುಗ್ಗಿದ ನೀರು..50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ..!

ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದೆ ಅದ್ರಲ್ಲೂ ಕರಾವಳಿ ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಊರಿಗೆ ಊರೇ ಜಲದಿಗ್ಭಂದನಕ್ಕೊಳಗಾಗಿದೆ. ಸೇತುವೆಗಳು ಜಲಾವೃತಗೊಂಡಿದ್ದು, ಹಲವು ಮನೆಗಳು ಕುಸಿದು ಬಿದ್ದಿವೆ. ಮಲೆನಾಡು ಭಾಗದಲ್ಲಿ ಸುರೀತಿರೋ ಪುನರ್ವಸು ಮಳೆಯ(Rain) ಅಟ್ಟಹಾಸಕ್ಕೆ ಸಂಪೂರ್ಣ ಕರಾವಳಿ ತತ್ತರಿಸಿದೆ. ಬತ್ತಿ ಹೋಗಿದ್ದ ನದಿಗಳು ಈಗ ರೌದ್ರಾವತಾರ ತಾಳಿದ್ದು, ಊರಿಗೆ ಊರೇ ಮುಳುಗಿ ಹೋಗಿದೆ. ಮಲೆನಾಡಲ್ಲಿ ಸುರಿಯುತ್ತಿರುವ ಭೀಕರ ಮಳೆಗೆ ಮಲೆನಾಡಿಗರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ತುಂಗಾ ,ಹೇಮಾವತಿ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಜೀವ ಕೈಯಲ್ಲಿಡಿದು ಬದುಕುವಂತಾಗಿದೆ. ನದಿಗಳ ನೀರು(Water) ಜಮೀನು ಹಾಗೂ ರಸ್ತೆಗಳಿಗೆ ನುಗ್ಗಿ ಸಂಪೂರ್ಣ ಜಲಾವೃತವಾಗಿದ್ರೆ. ಭಾರೀ ಪ್ರಮಾಣದಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಸಾವು..! ಅವರು ರೀಲ್ಸ್‌ನಲ್ಲೇ ಧರ್ಮದ ಪಾಠ ಮಾಡ್ತಿದ್ರು..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more