ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

Published : Oct 13, 2023, 10:35 AM IST

ತಮಿಳುನಾಡಿಗೆ ಪ್ರತಿನಿತ್ಯ ಕಾವೇರಿ ನೀರು ಹರಿಯುತ್ತಿದೆ. ಇದರ ಎಫೆಕ್ಟ್ ತುಮಕೂರಿಗೂ ತಟ್ಟಿದೆ. ಹೇಮಾವತಿಯಿಂದ ಸರ್ಕಾರ ನೀರು ಹರಿಸುತ್ತಿದ್ರೆ..ಇತ್ತ ಕಲ್ಪತರು ನಾಡಿಗೆ ಕುಡಿಯೋ ನೀರಿನ ಆತಂಕ ಎದುರಾಗಿದೆ.

ಕಾವೇರಿ ನೀರಿಗಾಗಿ ತಮಿಳುನಾಡು ಜಿದ್ದಿಗೆ ಬಿದ್ದಿದೆ. ತಮಿಳುನಾಡು ಮೊಂಡಾಟ, ಹಠವಾಧಿ ನಡೆಯಿಂದಲೇ ನೀರು ಪಡೆಯುತ್ತಿದೆ. ಮೊನ್ನೆ ಕೂಡ ನಿತ್ಯ 3 ಸಾವಿರ ಕ್ಯೂಸೆಕ್ನಂತೆ 15 ದಿನ ತಮಿಳುನಾಡಿಗೆ ನೀರು ಬಿಡುವಂತೆ CWRC ಸೂಚಿಸಿದೆ. ಕರ್ನಾಟಕದಲ್ಲೇ(Karnataka) ನೀರಿಲ್ಲದೆ ಬರ ತಾಂಡವವಾಡ್ತಿದೆ. ಬರದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ(Tamilnadu) ನೀರು ಬಿಟ್ಟು ಆದೇಶ ಪಾಲಿಸುತ್ತಿದೆ.. ಇದರಿಂದ ಕಾವೇರಿ ನೀರನ್ನೇ ನಂಬಿಕೊಂಡಿದ್ದ ಮಂಡ್ಯ, ಮೈಸೂರು, ಬೆಂಗಳೂರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲ ಕಾವೇರಿ(Cauvery) ನೀರಿನ ಬರ ತುಮಕೂರು ಜಿಲ್ಲೆಗೂ ತಟ್ಟಿದೆ. ತುಮಕೂರು ಜನ ಕುಡಿಯೋ ನೀರಿಗಾಗಿ ಹೇಮಾವತಿ ನೀರನ್ನೇ ಅವಲಂಬಿಸಿದ್ದಾರೆ. ಹಾಸನದ ಗೋರೂರು ಡ್ಯಾಂನಿಂದ ತುಮಕೂರು(Tumakuru) ಜಿಲ್ಲೆಗೆ ಹೇಮಾವತಿ ನೀರು ಪೂರೈಕೆ ಆಗುತ್ತೆ..ಆದ್ರೆ ಈ ಬಾರಿ ಹೇಮಾವತಿ(Hemavati) ಮೂಲಕ ತಮಿಳುನಾಡಿಗೆ ಸರ್ಕಾರ ನೀರು ಹರಿಸಿದೆ. ಹೀಗಾಗಿ ಗೋರಾರು ಜಲಾಶಯದಲ್ಲಿ 14 ಟಿಎಮ್‌ಸಿ ನೀರು ಇದೆ ಎನ್ನಲಾಗ್ತಿದೆ. ಇಷ್ಟು ನೀರು ತುಮಕೂರು ಹಾಗೂ ಹಾಸನ ಜಿಲ್ಲೆಗೆ ಹರಿಸಲು ಸಾಲುತ್ತಿಲ್ಲ. ತುಮಕೂರು  ಜಿಲ್ಲೆಗೆ ಗೋರಾರು ಜಲಾಶಯದಿಂದ ಪ್ರತಿ ವರ್ಷ 25 TMC ನೀರು ಬಿಡಬೇಕು..ಆದ್ರೆ ಇಲ್ಲಿವರೆಗೆ ಕೇವಲ 5 TMC ನೀರು ಮಾತ್ರ ಹರಿಸಿದೆ. ಇನ್ನು 20 ಟಿಎಂಸಿ ನೀರು ಬಿಡಬೇಕಿರುವ ಜಲಾಶಯದಲ್ಲೇ 14 ಟಿಎಂಸಿ ನೀರಿದ್ದು ಇದು ಎರಡು ಜಿಲ್ಲೆಗೆ ಹಂಚಿಕೆ ಆಗಬೇಕು. ಈ ನೀರು ಡಿಸೆಂಬರ್ ತನಕ ಮಾತ್ರ ಕುಡಿಯೋಕೆ ಸಾಧ್ಯವಾಗುತ್ತೆ. ಆ ನಂತರ ತುಮಕೂರಿನ ಜನ ಕುಡಿಯೋ ನೀರಿಗೂ ಪರದಾಡಬೇಕಾಗುತ್ತೆ. ಹೀಗಾಗಿ ಮಾಜಿ ಸಚಿವ ಸೊಗಡು ಶಿವಣ್ಣ ಹಾಸನ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಮತ್ತು ತುಮಕೂರು ಉಸ್ತುವಾರಿ ಸಚಿವ ಜಿ.ಪರಮೇಶ್ವರ್‌ಗೆ ಪತ್ರ ಬರೆದಿದ್ದು ಜಿಲ್ಲೆಗೆ ನೀರು ಹರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅಚ್ಚರಿ ಮೂಡಿಸುತ್ತೆ ಸ್ಟಾರ್ಸ್ ಸಿಕ್ರೇಟ್‌ ಡಯೆಟ್: 72ರ ರಜಿನಿಕಾಂತ್ ಹೈ ಬಿಪಿ ಬಂದಾಗ ಏನ್ಮಾಡಿದ್ರು ಗೊತ್ತಾ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more