ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

ಕಲ್ಪತರು ನಾಡಿಗೂ ಕಾವೇರಿ ನೀರಿನ ಸಂಕಷ್ಟ: ತುಮಕೂರಿನಲ್ಲಿ ಕುಡಿಯೋ ನೀರಿಗೆ ಹಾಹಾಕಾರ ?

Published : Oct 13, 2023, 10:35 AM IST

ತಮಿಳುನಾಡಿಗೆ ಪ್ರತಿನಿತ್ಯ ಕಾವೇರಿ ನೀರು ಹರಿಯುತ್ತಿದೆ. ಇದರ ಎಫೆಕ್ಟ್ ತುಮಕೂರಿಗೂ ತಟ್ಟಿದೆ. ಹೇಮಾವತಿಯಿಂದ ಸರ್ಕಾರ ನೀರು ಹರಿಸುತ್ತಿದ್ರೆ..ಇತ್ತ ಕಲ್ಪತರು ನಾಡಿಗೆ ಕುಡಿಯೋ ನೀರಿನ ಆತಂಕ ಎದುರಾಗಿದೆ.

ಕಾವೇರಿ ನೀರಿಗಾಗಿ ತಮಿಳುನಾಡು ಜಿದ್ದಿಗೆ ಬಿದ್ದಿದೆ. ತಮಿಳುನಾಡು ಮೊಂಡಾಟ, ಹಠವಾಧಿ ನಡೆಯಿಂದಲೇ ನೀರು ಪಡೆಯುತ್ತಿದೆ. ಮೊನ್ನೆ ಕೂಡ ನಿತ್ಯ 3 ಸಾವಿರ ಕ್ಯೂಸೆಕ್ನಂತೆ 15 ದಿನ ತಮಿಳುನಾಡಿಗೆ ನೀರು ಬಿಡುವಂತೆ CWRC ಸೂಚಿಸಿದೆ. ಕರ್ನಾಟಕದಲ್ಲೇ(Karnataka) ನೀರಿಲ್ಲದೆ ಬರ ತಾಂಡವವಾಡ್ತಿದೆ. ಬರದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ(Tamilnadu) ನೀರು ಬಿಟ್ಟು ಆದೇಶ ಪಾಲಿಸುತ್ತಿದೆ.. ಇದರಿಂದ ಕಾವೇರಿ ನೀರನ್ನೇ ನಂಬಿಕೊಂಡಿದ್ದ ಮಂಡ್ಯ, ಮೈಸೂರು, ಬೆಂಗಳೂರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲ ಕಾವೇರಿ(Cauvery) ನೀರಿನ ಬರ ತುಮಕೂರು ಜಿಲ್ಲೆಗೂ ತಟ್ಟಿದೆ. ತುಮಕೂರು ಜನ ಕುಡಿಯೋ ನೀರಿಗಾಗಿ ಹೇಮಾವತಿ ನೀರನ್ನೇ ಅವಲಂಬಿಸಿದ್ದಾರೆ. ಹಾಸನದ ಗೋರೂರು ಡ್ಯಾಂನಿಂದ ತುಮಕೂರು(Tumakuru) ಜಿಲ್ಲೆಗೆ ಹೇಮಾವತಿ ನೀರು ಪೂರೈಕೆ ಆಗುತ್ತೆ..ಆದ್ರೆ ಈ ಬಾರಿ ಹೇಮಾವತಿ(Hemavati) ಮೂಲಕ ತಮಿಳುನಾಡಿಗೆ ಸರ್ಕಾರ ನೀರು ಹರಿಸಿದೆ. ಹೀಗಾಗಿ ಗೋರಾರು ಜಲಾಶಯದಲ್ಲಿ 14 ಟಿಎಮ್‌ಸಿ ನೀರು ಇದೆ ಎನ್ನಲಾಗ್ತಿದೆ. ಇಷ್ಟು ನೀರು ತುಮಕೂರು ಹಾಗೂ ಹಾಸನ ಜಿಲ್ಲೆಗೆ ಹರಿಸಲು ಸಾಲುತ್ತಿಲ್ಲ. ತುಮಕೂರು  ಜಿಲ್ಲೆಗೆ ಗೋರಾರು ಜಲಾಶಯದಿಂದ ಪ್ರತಿ ವರ್ಷ 25 TMC ನೀರು ಬಿಡಬೇಕು..ಆದ್ರೆ ಇಲ್ಲಿವರೆಗೆ ಕೇವಲ 5 TMC ನೀರು ಮಾತ್ರ ಹರಿಸಿದೆ. ಇನ್ನು 20 ಟಿಎಂಸಿ ನೀರು ಬಿಡಬೇಕಿರುವ ಜಲಾಶಯದಲ್ಲೇ 14 ಟಿಎಂಸಿ ನೀರಿದ್ದು ಇದು ಎರಡು ಜಿಲ್ಲೆಗೆ ಹಂಚಿಕೆ ಆಗಬೇಕು. ಈ ನೀರು ಡಿಸೆಂಬರ್ ತನಕ ಮಾತ್ರ ಕುಡಿಯೋಕೆ ಸಾಧ್ಯವಾಗುತ್ತೆ. ಆ ನಂತರ ತುಮಕೂರಿನ ಜನ ಕುಡಿಯೋ ನೀರಿಗೂ ಪರದಾಡಬೇಕಾಗುತ್ತೆ. ಹೀಗಾಗಿ ಮಾಜಿ ಸಚಿವ ಸೊಗಡು ಶಿವಣ್ಣ ಹಾಸನ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಮತ್ತು ತುಮಕೂರು ಉಸ್ತುವಾರಿ ಸಚಿವ ಜಿ.ಪರಮೇಶ್ವರ್‌ಗೆ ಪತ್ರ ಬರೆದಿದ್ದು ಜಿಲ್ಲೆಗೆ ನೀರು ಹರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅಚ್ಚರಿ ಮೂಡಿಸುತ್ತೆ ಸ್ಟಾರ್ಸ್ ಸಿಕ್ರೇಟ್‌ ಡಯೆಟ್: 72ರ ರಜಿನಿಕಾಂತ್ ಹೈ ಬಿಪಿ ಬಂದಾಗ ಏನ್ಮಾಡಿದ್ರು ಗೊತ್ತಾ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more