ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್! ಸಿಟಿಮಂದಿ ಫುಲ್ ಫಿದಾ!

ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್! ಸಿಟಿಮಂದಿ ಫುಲ್ ಫಿದಾ!

Published : May 07, 2024, 05:24 PM IST

ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್ ಆಗಿ ಮಾರ್ಪಟ್ಟಿದೆ. 15 ವರ್ಷದ ಹಳೆಯ ರೈಲಿನ ಬೋಗಿಯನ್ನು ರೆಸ್ಟೋರೆಂಟ್ ಆಗಿ ಬದಲಾವಣೆ ಮಾಡಲಾಗಿದ್ದು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣದಲ್ಲಿ ಇವುಗಳನ್ನು ಕಾಣಬಹುದಾಗಿದೆ.

ರೈಲ್ವೇ ಇಲಾಖೆ (Railway Department) ಆಗಾಗ್ಗೆ ವಿಶೇಷ  ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಪ್ರಯಾಣಿಕರಿಗೆ ಭಿನ್ನ ಅನುಭವ ನೀಡುವ ಕೆಲಸ ಮಾಡುತ್ತಲೇ ಇರುತ್ತದೆ. ಅದರಂತೆ  ರೈಲ್ವೇ ಇಲಾಖೆ ಈಗ  ಕಸವನ್ನು ರಸವಾಗಿಸುವ ಕೆಲಸ ಮಾಡಿದೆ. ರೈಲ್ವೇ ಇಲಾಖೆಯ ಈ ಅದ್ಭುತ ಪ್ಲ್ಯಾನ್‌ಗೆ ಸಿಟಿಮಂದಿ ಫುಲ್ ಫಿದಾ ಆಗಿದ್ದಾರೆ. ಅಂದರೆ ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ (Railway bogie) ಇಂದು ಹೈಟೆಕ್ ರೆಸ್ಟೋರೆಂಟ್ (Restaurant) ಆಗಿ ಮಾರ್ಪಟ್ಟಿದೆ. 15 ವರ್ಷದ ಹಳೆಯ ರೈಲಿನ ಬೋಗಿಯನ್ನು ರೆಸ್ಟೋರೆಂಟ್ ಆಗಿ ಬದಲಾವಣೆ ಮಾಡಲಾಗಿದ್ದು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣ (Majestic Railway Station) ಮತ್ತು ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣದಲ್ಲಿ ಜನರನ್ನು ಕೈಬೀಸಿ ಕರೆಯುತ್ತಿವೆ. 

ಈ ನಡುವೆ  ಬೋಗಿ ಬಳಕೆ ಮಾಡಿಕೊಂಡು ವಿನೂತನ ರೆಸ್ಟೋರೆಂಟ್ ಮಾಡಲು ಉಚಿತ ಬೋಗಿ ನೀಡಲು ರೈಲ್ವೇ ಇಲಾಖೆ ಸಹ ಮುಂದಾಗಿದೆ. ಈ ಕಾರಣಕ್ಕೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಈ ರೆಸ್ಟೋರೆಂಟ್‌ ಅನ್ನು ಖಾಸಗಿ ಕಂಪನಿಗೆ ವರ್ಷಕ್ಕೆ 87 ಲಕ್ಷ ರೂಪಾಯಿಗೆ ಗುತ್ತಿಗೆ ನೀಡಲಾಗಿದೆ. ಇನ್ನು ಈ ಈ ರೆಸ್ಟೋರೆಂಟ್ ನಲ್ಲಿ ಒಮ್ಮೆ 40 ಜನ ಕೂತು ಊಟ ಮಾಡಬಹುದಾಗಿದೆ . ಅಲ್ಲದೆ  ದಿನದ 24 ಗಂಟೆಗಳ ಕಾಲ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸಲಿದ್ದು, ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಹೈಟೆಕ್ ಫೀಲ್  ನೀಡಲಿದೆ. ಇಷ್ಟು ಮಾತ್ರವಲ್ಲದೆ ಗ್ರಾಹಕರ ಭದ್ರತೆಯ ದೃಷ್ಟಿಯಿಂದ 5 ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಈ ನಡುವೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಪ್ರತಿನಿತ್ಯ 2 ಲಕ್ಷ ಜನ ಸಂಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಸಿಡಿ ಕೇಸ್‌ನ ಕಥಾ ನಾಯಕ ಕಾಂಗ್ರೆಸ್‌ನ ಡಿಕೆಶಿ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!