Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

Published : Feb 09, 2022, 09:05 AM ISTUpdated : Feb 09, 2022, 09:19 AM IST

*ರಾಜ್ಯದಲ್ಲಿ ಹಿಂಸೆಗೆ ತಿರುಗಿದ ಹಿಜಾಬ್‌-ಕೇಸರಿ ಶಾಲು ವಿವಾದ
*ಪೊಲೀಸರಿಂದ ಕಾಲೇಜಲ್ಲಿ ಲಾಠಿ ಚಾಜ್‌ರ್‍, ಅಶ್ರುವಾಯು ಪ್ರಯೋಗ
*ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಚರ್ಚೆ
*ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು (ಫೆ. 09): ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್‌-ಕೇಸರಿ ಶಾಲು ಸಂಘರ್ಷ(Hijab Row) ಇದೀಗ ಹಿಂಸೆಗೆ ತಿರುಗಿದೆ. ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು, ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಹಿಂಸಾಚಾರ (violence) ನಡೆದಿದೆ. ವಿದ್ಯಾರ್ಥಿಗಳು ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದಾರೆ. ಈ ಬೆನ್ನಲ್ಲೇ ಗ್ರಹ, ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ , ಶಿಕ್ಷಣ ಸಚಿವ ಬಿ ಸಿ ನಾಗೇಶ್‌, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಾಣ ನೇತೃತ್ವದಲ್ಲಿ ಸಭೆ ನಡಿದಿದೆ.

ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ವಿವಾದದ ಬಗ್ಗೆ ಚರ್ಚಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಕೋರ್ಟ್‌ ತೀರ್ಪು ಏನೇ ಬಂದರೂ ಅದನ್ನು ಪಾಲಿಸುತ್ತೇವೆ ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟದಲ್ಲಿ ಹೊತ್ತಿದ ಹಿಜಾಬ್ ಬೆಂಕಿ, 18 ಜಿಲ್ಲೆಗಳ 54 ಕಾಲೇಜಲ್ಲಿ ಪ್ರತಿಭಟನೆ!

ಇನ್ನು ಹಿಜಾಬ್‌-ಕೇಸರಿ ಶಾಲು ವಿವಾದದ ಕಿಡಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ 1ರಿಂದ 8ನೇ ತರಗತಿಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರೌಢಶಾಲೆ, ಪಿಯು ಕಾಲೇಜು, ಎಲ್ಲಾ ವಿಶ್ವವಿದ್ಯಾಲಯಗಳು, ಅವುಗಳ ಸಂಯೋಜಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಿ ಆದೇಶಿಸಿದೆ. ಅದರಂತೆ ಫೆ.9ರ ಬುಧವಾರದಿಂದ ಫೆ.11ರ ಶುಕ್ರವಾರದ ವರೆಗೆ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ 9ನೇ ತರಗತಿ ಮತ್ತು ಅದರ ಮೇಲ್ಮಟ್ಟದ ಎಲ್ಲಾ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಚಟುವಟಿಕೆಗಳು ಬಂದ್‌ ಆಗಲಿವೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more