Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

Published : Feb 09, 2022, 09:05 AM ISTUpdated : Feb 09, 2022, 09:19 AM IST

*ರಾಜ್ಯದಲ್ಲಿ ಹಿಂಸೆಗೆ ತಿರುಗಿದ ಹಿಜಾಬ್‌-ಕೇಸರಿ ಶಾಲು ವಿವಾದ
*ಪೊಲೀಸರಿಂದ ಕಾಲೇಜಲ್ಲಿ ಲಾಠಿ ಚಾಜ್‌ರ್‍, ಅಶ್ರುವಾಯು ಪ್ರಯೋಗ
*ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಚರ್ಚೆ
*ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು (ಫೆ. 09): ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್‌-ಕೇಸರಿ ಶಾಲು ಸಂಘರ್ಷ(Hijab Row) ಇದೀಗ ಹಿಂಸೆಗೆ ತಿರುಗಿದೆ. ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು, ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಹಿಂಸಾಚಾರ (violence) ನಡೆದಿದೆ. ವಿದ್ಯಾರ್ಥಿಗಳು ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದಾರೆ. ಈ ಬೆನ್ನಲ್ಲೇ ಗ್ರಹ, ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ , ಶಿಕ್ಷಣ ಸಚಿವ ಬಿ ಸಿ ನಾಗೇಶ್‌, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಾಣ ನೇತೃತ್ವದಲ್ಲಿ ಸಭೆ ನಡಿದಿದೆ.

ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ವಿವಾದದ ಬಗ್ಗೆ ಚರ್ಚಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಕೋರ್ಟ್‌ ತೀರ್ಪು ಏನೇ ಬಂದರೂ ಅದನ್ನು ಪಾಲಿಸುತ್ತೇವೆ ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟದಲ್ಲಿ ಹೊತ್ತಿದ ಹಿಜಾಬ್ ಬೆಂಕಿ, 18 ಜಿಲ್ಲೆಗಳ 54 ಕಾಲೇಜಲ್ಲಿ ಪ್ರತಿಭಟನೆ!

ಇನ್ನು ಹಿಜಾಬ್‌-ಕೇಸರಿ ಶಾಲು ವಿವಾದದ ಕಿಡಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ 1ರಿಂದ 8ನೇ ತರಗತಿಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರೌಢಶಾಲೆ, ಪಿಯು ಕಾಲೇಜು, ಎಲ್ಲಾ ವಿಶ್ವವಿದ್ಯಾಲಯಗಳು, ಅವುಗಳ ಸಂಯೋಜಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಿ ಆದೇಶಿಸಿದೆ. ಅದರಂತೆ ಫೆ.9ರ ಬುಧವಾರದಿಂದ ಫೆ.11ರ ಶುಕ್ರವಾರದ ವರೆಗೆ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ 9ನೇ ತರಗತಿ ಮತ್ತು ಅದರ ಮೇಲ್ಮಟ್ಟದ ಎಲ್ಲಾ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಚಟುವಟಿಕೆಗಳು ಬಂದ್‌ ಆಗಲಿವೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more