Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

Published : Feb 09, 2022, 09:05 AM ISTUpdated : Feb 09, 2022, 09:19 AM IST

*ರಾಜ್ಯದಲ್ಲಿ ಹಿಂಸೆಗೆ ತಿರುಗಿದ ಹಿಜಾಬ್‌-ಕೇಸರಿ ಶಾಲು ವಿವಾದ
*ಪೊಲೀಸರಿಂದ ಕಾಲೇಜಲ್ಲಿ ಲಾಠಿ ಚಾಜ್‌ರ್‍, ಅಶ್ರುವಾಯು ಪ್ರಯೋಗ
*ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಚರ್ಚೆ
*ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು (ಫೆ. 09): ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್‌-ಕೇಸರಿ ಶಾಲು ಸಂಘರ್ಷ(Hijab Row) ಇದೀಗ ಹಿಂಸೆಗೆ ತಿರುಗಿದೆ. ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು, ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಹಿಂಸಾಚಾರ (violence) ನಡೆದಿದೆ. ವಿದ್ಯಾರ್ಥಿಗಳು ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದಾರೆ. ಈ ಬೆನ್ನಲ್ಲೇ ಗ್ರಹ, ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ , ಶಿಕ್ಷಣ ಸಚಿವ ಬಿ ಸಿ ನಾಗೇಶ್‌, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಾಣ ನೇತೃತ್ವದಲ್ಲಿ ಸಭೆ ನಡಿದಿದೆ.

ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ವಿವಾದದ ಬಗ್ಗೆ ಚರ್ಚಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಕೋರ್ಟ್‌ ತೀರ್ಪು ಏನೇ ಬಂದರೂ ಅದನ್ನು ಪಾಲಿಸುತ್ತೇವೆ ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟದಲ್ಲಿ ಹೊತ್ತಿದ ಹಿಜಾಬ್ ಬೆಂಕಿ, 18 ಜಿಲ್ಲೆಗಳ 54 ಕಾಲೇಜಲ್ಲಿ ಪ್ರತಿಭಟನೆ!

ಇನ್ನು ಹಿಜಾಬ್‌-ಕೇಸರಿ ಶಾಲು ವಿವಾದದ ಕಿಡಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ 1ರಿಂದ 8ನೇ ತರಗತಿಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರೌಢಶಾಲೆ, ಪಿಯು ಕಾಲೇಜು, ಎಲ್ಲಾ ವಿಶ್ವವಿದ್ಯಾಲಯಗಳು, ಅವುಗಳ ಸಂಯೋಜಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಿ ಆದೇಶಿಸಿದೆ. ಅದರಂತೆ ಫೆ.9ರ ಬುಧವಾರದಿಂದ ಫೆ.11ರ ಶುಕ್ರವಾರದ ವರೆಗೆ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ 9ನೇ ತರಗತಿ ಮತ್ತು ಅದರ ಮೇಲ್ಮಟ್ಟದ ಎಲ್ಲಾ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಚಟುವಟಿಕೆಗಳು ಬಂದ್‌ ಆಗಲಿವೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more