ಬೇಲೂರು ಚನ್ನಕೇಶವ ದೇವಸ್ಥಾನ ರಥೋತ್ಸವ ವೇಳೆ ಕುರಾನ್ ಪಠಣ, ವಿಹೆಚ್​​ಪಿ ಪ್ರತಿಭಟನೆ

Mar 28, 2023, 4:41 PM IST

ಐತಿಹಾಸಿಕ ಬೇಲೂರು ಚನ್ನಕೇಶವ ಸ್ವಾಮಿಯ ರಥೋತ್ಸವದ ವೇಳೆ ಕುರಾನ್ ಪಠಣೆ ಮಾಡುವ ಆಚರಣೆ ಇದ್ದು, ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡದಂತೆ ಬೇಲೂರಿನಲ್ಲಿ ಚನ್ನಕೇಶವ ದೇವಸ್ಥಾನದ ಬಳಿ ಜರಂಗದಳ ಕಾರ್ಯಕರ್ತರು ಧರಣಿ ನಡೆಸಿದರು. ಏಪ್ರಿಲ್‌ 4 ಮತ್ತು ಏಪ್ರಿಲ್‌ ‌5ರಂದು ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವ ನಡೆಯಲಿದ್ದು, ಈ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂ ಸಂಘಟನೆಗಳು ಪಟ್ಟುಹಿಡಿದಿವೆ. ಇನ್ನು ಪ್ರತಿಭಟನೆ ವೇಳೆ ಬೈಕ್‌ನಲ್ಲಿ ಬಂದ ಮುಸ್ಲಿಂ ಯುವಕ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ಇದರಿಂದ ಸಿಟ್ಟಿಗೆದ್ದ ಪ್ರತಿಭಟನಾಕಾರರು ಮತ್ತು ಹಿಂದೂಪರ ಕಾರ್ಯಕರ್ತರು ಆಕ್ರೋಶ  ವ್ಯಕ್ತ ಪಡಿಸಿದ್ದಾರೆ.