ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!