Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ

Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ

Published : Mar 18, 2022, 12:28 PM ISTUpdated : Mar 18, 2022, 12:39 PM IST

*  ರಾಜ್ಯದ ಪ್ರಸಿದ್ಧ ಹಾಗೂ ಜನಪದ ಸಂಸ್ಕೃತಿಯ ಜೀವ ಚೈತನ್ಯ ಜಾತ್ರೆ
*  ಏಳು ದಿನಗಳ ಕಾಲ ಗದ್ದುಗೆಯಲ್ಲಿ ವೀರಾಜಮಾನಳಾಗುವ ಮಾರಿಕಾಂಬೆ 
*  ಶ್ರೀದೇವಿಗೆ ಬಾಳೆ ಹಣ್ಣು, ದುಡ್ಡು, ಎಸೆದು ಕೃತಾರ್ಥರಾದ ಸಹಸ್ರಾರು ಭಕ್ತರು 
 

ಕಾರವಾರ​(ಮಾ.18): ರಾಜ್ಯದ ಪ್ರಸಿದ್ಧ ಹಾಗೂ ಜನಪದ ಸಂಸ್ಕೃತಿಯ ಜೀವ ಚೈತನ್ಯ ಜಾತ್ರೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ ಅದ್ಧೂರಿಯಾಗಿ ನೇರವೇರಿದೆ. ಭಕ್ತರನ್ನು ಪೊರೆವ ಶಿರಸಿಯ ಮಾರಮ್ಮ ಮಾರಿಗುಡಿಯಿಂದ ಅಲಂಕೃತಗೊಂಡ ರಥದಲ್ಲಿ ಆರೂಢಳಾಗಿ ಹಾದಿ ಬೀದಿಯಲ್ಲಿ ನಿಲ್ಲುವ ಭಕ್ತರ ಕಡೆಗೆ ತನ್ನ ದೃಷ್ಠಿಯನ್ನು ಬೀರುತ್ತಾ ದೇವಳದ ರಾಜಮಾರ್ಗದಲ್ಲಿ ಸಾಗುತ್ತಾ ಎಲ್ಲರನ್ನೂ ಆಶೀರ್ವದಿಸಿದ್ದಾಳೆ. ಬಳಿಕ ಬಿಡಕಿಬೈಲಿನ ಜಾತ್ರೆ ಗದ್ದುಗೆಯಲ್ಲಿ ದೇವಿ ವಿರಾಜಮಾನಳಾಗಿದ್ದು, ನಾಳೆಯಿಂದ ಏಳು ದಿನಗಳ ಕಾಲ ಗದ್ದುಗೆಯಲ್ಲಿ ವೀರಾಜಮಾನಳಾಗಿಯೇ ಮಾರಿಕಾಂಬೆ ಕ್ಷೇತ್ರಕ್ಕೆ ಬರೋ ಭಕ್ತರನ್ನು ಪೊರೆಯಲಿದ್ದಾಳೆ. 

James 2022: ಅಪ್ಪು ಕೊನೆ ಚಿತ್ರವನ್ನು ನೋಡಿ ಪುನೀತರಾದ ಅಭಿಮಾನಿಗಳು

ನಸುಕಿನ ಜಾವದಲ್ಲೇ ರಥವನ್ನು ಏರಿದ್ದ ತಾಯಿ ಮಾರಿಕಾಂಬೆಯ ರಥೋತ್ಸವ ನೋಡಿ ಕಣ್ತುಂಬಿಳ್ಳಲು ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ಮೆರವಣಿಗೆಯುದ್ದಕ್ಕೂ ಸೇರಿದ ಸಹಸ್ರಾರು ಭಕ್ತರು ಶ್ರೀದೇವಿಗೆ ಬಾಳೆ ಹಣ್ಣು, ದುಡ್ಡು, ಎಸೆದು ಕೃತಾರ್ಥರಾದರು. ಇನ್ನು ಜಾತ್ರೆಗೆ ಆಗಮಿಸಿದ ಲಂಬಾಣಿ ಮಹಿಳೆಯರು ಸೋಬಾನೆ ಪದ ಹೇಳುತ್ತಾ ದೇವಿಗೆ ಸೇವೆ ಸಲ್ಲಿಸಿದ್ರೆ, ಹಲವು ಮಹಿಳೆಯರು, ಪುರುಷರು ದೇವಿಯನ್ನು ಆವಾಹನೆ ಮಾಡಿಕೊಂಡು ಆವೇಶಭರಿತರಾಗಿ ಕುಣಿದು ಮಾರಿಕಾಂಬೆ ತಾಯಿಗೆ ಸೇವೆ ಅರ್ಪಿಸಿದರು. ಮತ್ತೊಂದೆಡೆ ಕ್ಷೇತ್ರಕ್ಕೆ ಆಗಮಿಸಿದ್ದ ಲಕ್ಷಾಂತರ ಭಕ್ತಾಧಿಗಳ ಸುರಕ್ಷತೆಗಾಗಿ ಶಿರಸಿ ನಗರದಾದ್ಯಂತ ಪೊಲೀಸರಿಂದ ಭಾರೀ ಭಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

ಒಟ್ಟಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜಾತ್ರೆಯಲ್ಲಿ ಒಂದಾಗಿರುವ ಮಾರಿಕಾಂಬೆಯ ಜಾತ್ರಾ ರಥೋತ್ಸವ ಅದ್ಧೂರಿಯಾಗಿ ನಡೆದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು ತಮ್ಮ ಹರಕೆಗಳನ್ನು ಸಲ್ಲಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾದರು.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more