Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ

Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ

Published : Mar 18, 2022, 12:28 PM ISTUpdated : Mar 18, 2022, 12:39 PM IST

*  ರಾಜ್ಯದ ಪ್ರಸಿದ್ಧ ಹಾಗೂ ಜನಪದ ಸಂಸ್ಕೃತಿಯ ಜೀವ ಚೈತನ್ಯ ಜಾತ್ರೆ
*  ಏಳು ದಿನಗಳ ಕಾಲ ಗದ್ದುಗೆಯಲ್ಲಿ ವೀರಾಜಮಾನಳಾಗುವ ಮಾರಿಕಾಂಬೆ 
*  ಶ್ರೀದೇವಿಗೆ ಬಾಳೆ ಹಣ್ಣು, ದುಡ್ಡು, ಎಸೆದು ಕೃತಾರ್ಥರಾದ ಸಹಸ್ರಾರು ಭಕ್ತರು 
 

ಕಾರವಾರ​(ಮಾ.18): ರಾಜ್ಯದ ಪ್ರಸಿದ್ಧ ಹಾಗೂ ಜನಪದ ಸಂಸ್ಕೃತಿಯ ಜೀವ ಚೈತನ್ಯ ಜಾತ್ರೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ ಅದ್ಧೂರಿಯಾಗಿ ನೇರವೇರಿದೆ. ಭಕ್ತರನ್ನು ಪೊರೆವ ಶಿರಸಿಯ ಮಾರಮ್ಮ ಮಾರಿಗುಡಿಯಿಂದ ಅಲಂಕೃತಗೊಂಡ ರಥದಲ್ಲಿ ಆರೂಢಳಾಗಿ ಹಾದಿ ಬೀದಿಯಲ್ಲಿ ನಿಲ್ಲುವ ಭಕ್ತರ ಕಡೆಗೆ ತನ್ನ ದೃಷ್ಠಿಯನ್ನು ಬೀರುತ್ತಾ ದೇವಳದ ರಾಜಮಾರ್ಗದಲ್ಲಿ ಸಾಗುತ್ತಾ ಎಲ್ಲರನ್ನೂ ಆಶೀರ್ವದಿಸಿದ್ದಾಳೆ. ಬಳಿಕ ಬಿಡಕಿಬೈಲಿನ ಜಾತ್ರೆ ಗದ್ದುಗೆಯಲ್ಲಿ ದೇವಿ ವಿರಾಜಮಾನಳಾಗಿದ್ದು, ನಾಳೆಯಿಂದ ಏಳು ದಿನಗಳ ಕಾಲ ಗದ್ದುಗೆಯಲ್ಲಿ ವೀರಾಜಮಾನಳಾಗಿಯೇ ಮಾರಿಕಾಂಬೆ ಕ್ಷೇತ್ರಕ್ಕೆ ಬರೋ ಭಕ್ತರನ್ನು ಪೊರೆಯಲಿದ್ದಾಳೆ. 

James 2022: ಅಪ್ಪು ಕೊನೆ ಚಿತ್ರವನ್ನು ನೋಡಿ ಪುನೀತರಾದ ಅಭಿಮಾನಿಗಳು

ನಸುಕಿನ ಜಾವದಲ್ಲೇ ರಥವನ್ನು ಏರಿದ್ದ ತಾಯಿ ಮಾರಿಕಾಂಬೆಯ ರಥೋತ್ಸವ ನೋಡಿ ಕಣ್ತುಂಬಿಳ್ಳಲು ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ಮೆರವಣಿಗೆಯುದ್ದಕ್ಕೂ ಸೇರಿದ ಸಹಸ್ರಾರು ಭಕ್ತರು ಶ್ರೀದೇವಿಗೆ ಬಾಳೆ ಹಣ್ಣು, ದುಡ್ಡು, ಎಸೆದು ಕೃತಾರ್ಥರಾದರು. ಇನ್ನು ಜಾತ್ರೆಗೆ ಆಗಮಿಸಿದ ಲಂಬಾಣಿ ಮಹಿಳೆಯರು ಸೋಬಾನೆ ಪದ ಹೇಳುತ್ತಾ ದೇವಿಗೆ ಸೇವೆ ಸಲ್ಲಿಸಿದ್ರೆ, ಹಲವು ಮಹಿಳೆಯರು, ಪುರುಷರು ದೇವಿಯನ್ನು ಆವಾಹನೆ ಮಾಡಿಕೊಂಡು ಆವೇಶಭರಿತರಾಗಿ ಕುಣಿದು ಮಾರಿಕಾಂಬೆ ತಾಯಿಗೆ ಸೇವೆ ಅರ್ಪಿಸಿದರು. ಮತ್ತೊಂದೆಡೆ ಕ್ಷೇತ್ರಕ್ಕೆ ಆಗಮಿಸಿದ್ದ ಲಕ್ಷಾಂತರ ಭಕ್ತಾಧಿಗಳ ಸುರಕ್ಷತೆಗಾಗಿ ಶಿರಸಿ ನಗರದಾದ್ಯಂತ ಪೊಲೀಸರಿಂದ ಭಾರೀ ಭಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

ಒಟ್ಟಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜಾತ್ರೆಯಲ್ಲಿ ಒಂದಾಗಿರುವ ಮಾರಿಕಾಂಬೆಯ ಜಾತ್ರಾ ರಥೋತ್ಸವ ಅದ್ಧೂರಿಯಾಗಿ ನಡೆದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು ತಮ್ಮ ಹರಕೆಗಳನ್ನು ಸಲ್ಲಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾದರು.
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more