Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ

Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ

Published : Mar 18, 2022, 12:28 PM ISTUpdated : Mar 18, 2022, 12:39 PM IST

*  ರಾಜ್ಯದ ಪ್ರಸಿದ್ಧ ಹಾಗೂ ಜನಪದ ಸಂಸ್ಕೃತಿಯ ಜೀವ ಚೈತನ್ಯ ಜಾತ್ರೆ
*  ಏಳು ದಿನಗಳ ಕಾಲ ಗದ್ದುಗೆಯಲ್ಲಿ ವೀರಾಜಮಾನಳಾಗುವ ಮಾರಿಕಾಂಬೆ 
*  ಶ್ರೀದೇವಿಗೆ ಬಾಳೆ ಹಣ್ಣು, ದುಡ್ಡು, ಎಸೆದು ಕೃತಾರ್ಥರಾದ ಸಹಸ್ರಾರು ಭಕ್ತರು 
 

ಕಾರವಾರ​(ಮಾ.18): ರಾಜ್ಯದ ಪ್ರಸಿದ್ಧ ಹಾಗೂ ಜನಪದ ಸಂಸ್ಕೃತಿಯ ಜೀವ ಚೈತನ್ಯ ಜಾತ್ರೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ರಥೋತ್ಸವ ಅದ್ಧೂರಿಯಾಗಿ ನೇರವೇರಿದೆ. ಭಕ್ತರನ್ನು ಪೊರೆವ ಶಿರಸಿಯ ಮಾರಮ್ಮ ಮಾರಿಗುಡಿಯಿಂದ ಅಲಂಕೃತಗೊಂಡ ರಥದಲ್ಲಿ ಆರೂಢಳಾಗಿ ಹಾದಿ ಬೀದಿಯಲ್ಲಿ ನಿಲ್ಲುವ ಭಕ್ತರ ಕಡೆಗೆ ತನ್ನ ದೃಷ್ಠಿಯನ್ನು ಬೀರುತ್ತಾ ದೇವಳದ ರಾಜಮಾರ್ಗದಲ್ಲಿ ಸಾಗುತ್ತಾ ಎಲ್ಲರನ್ನೂ ಆಶೀರ್ವದಿಸಿದ್ದಾಳೆ. ಬಳಿಕ ಬಿಡಕಿಬೈಲಿನ ಜಾತ್ರೆ ಗದ್ದುಗೆಯಲ್ಲಿ ದೇವಿ ವಿರಾಜಮಾನಳಾಗಿದ್ದು, ನಾಳೆಯಿಂದ ಏಳು ದಿನಗಳ ಕಾಲ ಗದ್ದುಗೆಯಲ್ಲಿ ವೀರಾಜಮಾನಳಾಗಿಯೇ ಮಾರಿಕಾಂಬೆ ಕ್ಷೇತ್ರಕ್ಕೆ ಬರೋ ಭಕ್ತರನ್ನು ಪೊರೆಯಲಿದ್ದಾಳೆ. 

James 2022: ಅಪ್ಪು ಕೊನೆ ಚಿತ್ರವನ್ನು ನೋಡಿ ಪುನೀತರಾದ ಅಭಿಮಾನಿಗಳು

ನಸುಕಿನ ಜಾವದಲ್ಲೇ ರಥವನ್ನು ಏರಿದ್ದ ತಾಯಿ ಮಾರಿಕಾಂಬೆಯ ರಥೋತ್ಸವ ನೋಡಿ ಕಣ್ತುಂಬಿಳ್ಳಲು ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ಮೆರವಣಿಗೆಯುದ್ದಕ್ಕೂ ಸೇರಿದ ಸಹಸ್ರಾರು ಭಕ್ತರು ಶ್ರೀದೇವಿಗೆ ಬಾಳೆ ಹಣ್ಣು, ದುಡ್ಡು, ಎಸೆದು ಕೃತಾರ್ಥರಾದರು. ಇನ್ನು ಜಾತ್ರೆಗೆ ಆಗಮಿಸಿದ ಲಂಬಾಣಿ ಮಹಿಳೆಯರು ಸೋಬಾನೆ ಪದ ಹೇಳುತ್ತಾ ದೇವಿಗೆ ಸೇವೆ ಸಲ್ಲಿಸಿದ್ರೆ, ಹಲವು ಮಹಿಳೆಯರು, ಪುರುಷರು ದೇವಿಯನ್ನು ಆವಾಹನೆ ಮಾಡಿಕೊಂಡು ಆವೇಶಭರಿತರಾಗಿ ಕುಣಿದು ಮಾರಿಕಾಂಬೆ ತಾಯಿಗೆ ಸೇವೆ ಅರ್ಪಿಸಿದರು. ಮತ್ತೊಂದೆಡೆ ಕ್ಷೇತ್ರಕ್ಕೆ ಆಗಮಿಸಿದ್ದ ಲಕ್ಷಾಂತರ ಭಕ್ತಾಧಿಗಳ ಸುರಕ್ಷತೆಗಾಗಿ ಶಿರಸಿ ನಗರದಾದ್ಯಂತ ಪೊಲೀಸರಿಂದ ಭಾರೀ ಭಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

ಒಟ್ಟಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜಾತ್ರೆಯಲ್ಲಿ ಒಂದಾಗಿರುವ ಮಾರಿಕಾಂಬೆಯ ಜಾತ್ರಾ ರಥೋತ್ಸವ ಅದ್ಧೂರಿಯಾಗಿ ನಡೆದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು ತಮ್ಮ ಹರಕೆಗಳನ್ನು ಸಲ್ಲಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾದರು.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more