Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Published : Jan 15, 2025, 02:42 PM IST

ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಭಕ್ತರ ಮೇಲೆ ಹರಿದು ಓರ್ವ ಯುವತಿ ಸಾವಿಗೀಡಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾರನ್ನು ಚಲಾಯಿಸಿ ಈ ದುರ್ಘಟನೆ ಸಂಭವಿಸಿದೆ.

ಕಾರವಾರ (ಜ.15): ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಭಕ್ತಾಧಿಗಳ ಮೇಲೆ  ಕಾರು ಹಿದಿದೆ. ದುರ್ಘಟನೆಯಲ್ಲಿ ಓರ್ವ ಯುವತಿ ಸಾವು ಕಂಡಿದ್ದು, 8 ಮಂದಿಗೆ ಗಂಭೀರ ಗಾಯವಾಗಿದೆ. ಸಿದ್ಧಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಸಾವಿಗೀಡಾದ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಅವರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರಿಗೆ ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಗಾಯಗೊಂಡವರ ಪೈಕಿ ಕಲ್ಪನಾ ನಾಯ್ಕ್ (5) ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಮಕರ ಸಂಕ್ರಮಣ ಹಿನ್ನೆಲೆ ಅಯ್ಯಪ್ಪ ಸ್ವಾಮಿ ಮಂದಿರದ ಜಾತ್ರೆಗೆ ನೂರಾರು ಮಂದಿ ಸೇರಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಭಕ್ತರ ಮೇಲೆ ರೋಶನ್ ಫೆರ್ನಾಂಡೀಸ್ ಕಾರು ಹರಿಸಿದ್ದಾನೆ. ಅತೀ ವೇಗದಲ್ಲಿ ತನ್ನ ಇಕೋ ಸ್ಪೋರ್ಟ್ ಕಾರನ್ನು ಯರ್ರಾಬಿರ್ರಿ ಚಲಾಯಿಸಿದ್ದ. ದೇವಸ್ಥಾನದ ಮಂಟಪಕ್ಕೆ ಢಿಕ್ಕಿ ಹೊಡೆದ ನಂತರ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದ.

Uttara Kannada: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಆಕ್ರೋಶಗೊಂಡ ಭಕ್ತಾಧಿಗಳಿಂದ ಆರೋಪಿಯ ಕಾರಿನ ಮೇಲೆ ಕಲ್ಲೆಸೆತ, ಗ್ಲಾಸು ಪುಡಿಪುಡಿ ಮಾಡಲಾಗಿದೆ. ಹರಸಾಹಸಪಟ್ಟು ಆರೋಪಿಯನ್ನು ಠಾಣೆಗೆ ಪೊಲೀಸರು ಎಳೆದೊಯ್ದಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ರೋಶನ್ ಫೆರ್ನಾಂಡೀಸ್ ವಿರುದ್ಧ ಪ್ರಕರಣ ದಾಖಲಾಗಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more