Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Published : Jan 15, 2025, 02:42 PM IST

ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಭಕ್ತರ ಮೇಲೆ ಹರಿದು ಓರ್ವ ಯುವತಿ ಸಾವಿಗೀಡಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾರನ್ನು ಚಲಾಯಿಸಿ ಈ ದುರ್ಘಟನೆ ಸಂಭವಿಸಿದೆ.

ಕಾರವಾರ (ಜ.15): ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಭಕ್ತಾಧಿಗಳ ಮೇಲೆ  ಕಾರು ಹಿದಿದೆ. ದುರ್ಘಟನೆಯಲ್ಲಿ ಓರ್ವ ಯುವತಿ ಸಾವು ಕಂಡಿದ್ದು, 8 ಮಂದಿಗೆ ಗಂಭೀರ ಗಾಯವಾಗಿದೆ. ಸಿದ್ಧಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಸಾವಿಗೀಡಾದ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಅವರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರಿಗೆ ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಗಾಯಗೊಂಡವರ ಪೈಕಿ ಕಲ್ಪನಾ ನಾಯ್ಕ್ (5) ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಮಕರ ಸಂಕ್ರಮಣ ಹಿನ್ನೆಲೆ ಅಯ್ಯಪ್ಪ ಸ್ವಾಮಿ ಮಂದಿರದ ಜಾತ್ರೆಗೆ ನೂರಾರು ಮಂದಿ ಸೇರಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಭಕ್ತರ ಮೇಲೆ ರೋಶನ್ ಫೆರ್ನಾಂಡೀಸ್ ಕಾರು ಹರಿಸಿದ್ದಾನೆ. ಅತೀ ವೇಗದಲ್ಲಿ ತನ್ನ ಇಕೋ ಸ್ಪೋರ್ಟ್ ಕಾರನ್ನು ಯರ್ರಾಬಿರ್ರಿ ಚಲಾಯಿಸಿದ್ದ. ದೇವಸ್ಥಾನದ ಮಂಟಪಕ್ಕೆ ಢಿಕ್ಕಿ ಹೊಡೆದ ನಂತರ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದ.

Uttara Kannada: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಆಕ್ರೋಶಗೊಂಡ ಭಕ್ತಾಧಿಗಳಿಂದ ಆರೋಪಿಯ ಕಾರಿನ ಮೇಲೆ ಕಲ್ಲೆಸೆತ, ಗ್ಲಾಸು ಪುಡಿಪುಡಿ ಮಾಡಲಾಗಿದೆ. ಹರಸಾಹಸಪಟ್ಟು ಆರೋಪಿಯನ್ನು ಠಾಣೆಗೆ ಪೊಲೀಸರು ಎಳೆದೊಯ್ದಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ರೋಶನ್ ಫೆರ್ನಾಂಡೀಸ್ ವಿರುದ್ಧ ಪ್ರಕರಣ ದಾಖಲಾಗಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more