Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Published : Jan 15, 2025, 02:42 PM IST

ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಭಕ್ತರ ಮೇಲೆ ಹರಿದು ಓರ್ವ ಯುವತಿ ಸಾವಿಗೀಡಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾರನ್ನು ಚಲಾಯಿಸಿ ಈ ದುರ್ಘಟನೆ ಸಂಭವಿಸಿದೆ.

ಕಾರವಾರ (ಜ.15): ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಭಕ್ತಾಧಿಗಳ ಮೇಲೆ  ಕಾರು ಹಿದಿದೆ. ದುರ್ಘಟನೆಯಲ್ಲಿ ಓರ್ವ ಯುವತಿ ಸಾವು ಕಂಡಿದ್ದು, 8 ಮಂದಿಗೆ ಗಂಭೀರ ಗಾಯವಾಗಿದೆ. ಸಿದ್ಧಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಸಾವಿಗೀಡಾದ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಅವರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರಿಗೆ ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಗಾಯಗೊಂಡವರ ಪೈಕಿ ಕಲ್ಪನಾ ನಾಯ್ಕ್ (5) ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಮಕರ ಸಂಕ್ರಮಣ ಹಿನ್ನೆಲೆ ಅಯ್ಯಪ್ಪ ಸ್ವಾಮಿ ಮಂದಿರದ ಜಾತ್ರೆಗೆ ನೂರಾರು ಮಂದಿ ಸೇರಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಭಕ್ತರ ಮೇಲೆ ರೋಶನ್ ಫೆರ್ನಾಂಡೀಸ್ ಕಾರು ಹರಿಸಿದ್ದಾನೆ. ಅತೀ ವೇಗದಲ್ಲಿ ತನ್ನ ಇಕೋ ಸ್ಪೋರ್ಟ್ ಕಾರನ್ನು ಯರ್ರಾಬಿರ್ರಿ ಚಲಾಯಿಸಿದ್ದ. ದೇವಸ್ಥಾನದ ಮಂಟಪಕ್ಕೆ ಢಿಕ್ಕಿ ಹೊಡೆದ ನಂತರ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದ.

Uttara Kannada: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಆಕ್ರೋಶಗೊಂಡ ಭಕ್ತಾಧಿಗಳಿಂದ ಆರೋಪಿಯ ಕಾರಿನ ಮೇಲೆ ಕಲ್ಲೆಸೆತ, ಗ್ಲಾಸು ಪುಡಿಪುಡಿ ಮಾಡಲಾಗಿದೆ. ಹರಸಾಹಸಪಟ್ಟು ಆರೋಪಿಯನ್ನು ಠಾಣೆಗೆ ಪೊಲೀಸರು ಎಳೆದೊಯ್ದಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ರೋಶನ್ ಫೆರ್ನಾಂಡೀಸ್ ವಿರುದ್ಧ ಪ್ರಕರಣ ದಾಖಲಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more