Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Published : Jan 15, 2025, 02:42 PM IST

ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಭಕ್ತರ ಮೇಲೆ ಹರಿದು ಓರ್ವ ಯುವತಿ ಸಾವಿಗೀಡಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾರನ್ನು ಚಲಾಯಿಸಿ ಈ ದುರ್ಘಟನೆ ಸಂಭವಿಸಿದೆ.

ಕಾರವಾರ (ಜ.15): ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಭಕ್ತಾಧಿಗಳ ಮೇಲೆ  ಕಾರು ಹಿದಿದೆ. ದುರ್ಘಟನೆಯಲ್ಲಿ ಓರ್ವ ಯುವತಿ ಸಾವು ಕಂಡಿದ್ದು, 8 ಮಂದಿಗೆ ಗಂಭೀರ ಗಾಯವಾಗಿದೆ. ಸಿದ್ಧಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಸಾವಿಗೀಡಾದ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಅವರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರಿಗೆ ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಗಾಯಗೊಂಡವರ ಪೈಕಿ ಕಲ್ಪನಾ ನಾಯ್ಕ್ (5) ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಮಕರ ಸಂಕ್ರಮಣ ಹಿನ್ನೆಲೆ ಅಯ್ಯಪ್ಪ ಸ್ವಾಮಿ ಮಂದಿರದ ಜಾತ್ರೆಗೆ ನೂರಾರು ಮಂದಿ ಸೇರಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಭಕ್ತರ ಮೇಲೆ ರೋಶನ್ ಫೆರ್ನಾಂಡೀಸ್ ಕಾರು ಹರಿಸಿದ್ದಾನೆ. ಅತೀ ವೇಗದಲ್ಲಿ ತನ್ನ ಇಕೋ ಸ್ಪೋರ್ಟ್ ಕಾರನ್ನು ಯರ್ರಾಬಿರ್ರಿ ಚಲಾಯಿಸಿದ್ದ. ದೇವಸ್ಥಾನದ ಮಂಟಪಕ್ಕೆ ಢಿಕ್ಕಿ ಹೊಡೆದ ನಂತರ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದ.

Uttara Kannada: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಆಕ್ರೋಶಗೊಂಡ ಭಕ್ತಾಧಿಗಳಿಂದ ಆರೋಪಿಯ ಕಾರಿನ ಮೇಲೆ ಕಲ್ಲೆಸೆತ, ಗ್ಲಾಸು ಪುಡಿಪುಡಿ ಮಾಡಲಾಗಿದೆ. ಹರಸಾಹಸಪಟ್ಟು ಆರೋಪಿಯನ್ನು ಠಾಣೆಗೆ ಪೊಲೀಸರು ಎಳೆದೊಯ್ದಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ರೋಶನ್ ಫೆರ್ನಾಂಡೀಸ್ ವಿರುದ್ಧ ಪ್ರಕರಣ ದಾಖಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more