Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು

Published : Jan 15, 2025, 02:42 PM IST

ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಭಕ್ತರ ಮೇಲೆ ಹರಿದು ಓರ್ವ ಯುವತಿ ಸಾವಿಗೀಡಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾರನ್ನು ಚಲಾಯಿಸಿ ಈ ದುರ್ಘಟನೆ ಸಂಭವಿಸಿದೆ.

ಕಾರವಾರ (ಜ.15): ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಭಕ್ತಾಧಿಗಳ ಮೇಲೆ  ಕಾರು ಹಿದಿದೆ. ದುರ್ಘಟನೆಯಲ್ಲಿ ಓರ್ವ ಯುವತಿ ಸಾವು ಕಂಡಿದ್ದು, 8 ಮಂದಿಗೆ ಗಂಭೀರ ಗಾಯವಾಗಿದೆ. ಸಿದ್ಧಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಸಾವಿಗೀಡಾದ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಅವರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರಿಗೆ ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಗಾಯಗೊಂಡವರ ಪೈಕಿ ಕಲ್ಪನಾ ನಾಯ್ಕ್ (5) ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಮಕರ ಸಂಕ್ರಮಣ ಹಿನ್ನೆಲೆ ಅಯ್ಯಪ್ಪ ಸ್ವಾಮಿ ಮಂದಿರದ ಜಾತ್ರೆಗೆ ನೂರಾರು ಮಂದಿ ಸೇರಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಭಕ್ತರ ಮೇಲೆ ರೋಶನ್ ಫೆರ್ನಾಂಡೀಸ್ ಕಾರು ಹರಿಸಿದ್ದಾನೆ. ಅತೀ ವೇಗದಲ್ಲಿ ತನ್ನ ಇಕೋ ಸ್ಪೋರ್ಟ್ ಕಾರನ್ನು ಯರ್ರಾಬಿರ್ರಿ ಚಲಾಯಿಸಿದ್ದ. ದೇವಸ್ಥಾನದ ಮಂಟಪಕ್ಕೆ ಢಿಕ್ಕಿ ಹೊಡೆದ ನಂತರ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದ.

Uttara Kannada: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಆಕ್ರೋಶಗೊಂಡ ಭಕ್ತಾಧಿಗಳಿಂದ ಆರೋಪಿಯ ಕಾರಿನ ಮೇಲೆ ಕಲ್ಲೆಸೆತ, ಗ್ಲಾಸು ಪುಡಿಪುಡಿ ಮಾಡಲಾಗಿದೆ. ಹರಸಾಹಸಪಟ್ಟು ಆರೋಪಿಯನ್ನು ಠಾಣೆಗೆ ಪೊಲೀಸರು ಎಳೆದೊಯ್ದಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ರೋಶನ್ ಫೆರ್ನಾಂಡೀಸ್ ವಿರುದ್ಧ ಪ್ರಕರಣ ದಾಖಲಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more