ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ

Published : Jul 19, 2024, 11:22 AM ISTUpdated : Jul 19, 2024, 11:23 AM IST

ಮನೆ‌ ಗೋಡೆ ಕುಸಿದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.


ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ (Rain) ಹಿನ್ನೆಲೆ ಮನೆ‌ ಗೋಡೆ ಕುಸಿದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಮಳೆಗೆ ಮೂವರು ಬಲಿಯಾಗಿದ್ದಾರೆ. ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಮೂವರು ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಸುಮಾರು 30 ವರ್ಷದ ಚೆನ್ನಮ್ಮ ಹಾಗೂ ಅಮೂಲ್ಯ ಮತ್ತು ಅನುಶ್ರಿ ಎಂಬ ಎರಡು ಎಳೆಯ ಕಂದಮ್ಮಗಳು ಸಾವಿಗೀಡಾಗಿವೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗ್ತಿರೋ ಹಿನ್ನಲೆ ನಿರಂತರ ಮಳೆಗೆ ಮನೆ ಗೋಡೆ ಕುಸಿದು ಸಾವಿಗೀಡಾಗಿದ್ದಾರೆ. ಇಂದು‌ ನಸುಕಿನ ಜಾವ ಸುಮಾರು 3.30ಕ್ಕೆ ಈ ದುರ್ಘಟನೆ ನಡೆದಿದೆ. ಮನೆಯಲ್ಲಿ ಒಟ್ಟು 6 ಜನ ವಾಸವಾಗಿದ್ರು, ಮನೆ ಗೋಡೆಗಳು ಕುಸಿದ ಹಿನ್ನೆಲೆ ಮನೆಯಲ್ಲಿ ಮಲಗಿದ್ದ (House collapsed) ಆರು ಜನರ ಮೇಲೆ ಗೋಡೆಗಳು ಬಿದ್ದಿವೆ. ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವಿಗೀಡಾಗಿದ್ದಾರೆ (Died). ವಯೋವೃದ್ದೆ ಯಲ್ಲಮ್ಮ ಹಾಗೂ ಅವರ ಪುತ್ರ ಮುತ್ತು ಮತ್ತು  ಸೊಸೆ ಸುನೀತಾಗೆ ಗಂಭೀರ ಗಾಯವಾಗಿದೆ. ಸವಣೂರು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಡಿವೋರ್ಸ್ ಪೋಸ್ಟ್‌ಗೆ ಅಭಿಷೇಕ್ ಬಚ್ಚನ್ ಲೈಕ್ಸ್..! ಐಶ್ವರ್ಯಗೆ ವಿಚ್ಛೇಧನ ಕೊಡೋಕೆ ರೆಡಿಯಾದ್ರಾ ಅಭಿಷೇಕ್..?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more