ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ

Published : Jul 19, 2024, 11:22 AM ISTUpdated : Jul 19, 2024, 11:23 AM IST

ಮನೆ‌ ಗೋಡೆ ಕುಸಿದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.


ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ (Rain) ಹಿನ್ನೆಲೆ ಮನೆ‌ ಗೋಡೆ ಕುಸಿದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಮಳೆಗೆ ಮೂವರು ಬಲಿಯಾಗಿದ್ದಾರೆ. ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಮೂವರು ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಸುಮಾರು 30 ವರ್ಷದ ಚೆನ್ನಮ್ಮ ಹಾಗೂ ಅಮೂಲ್ಯ ಮತ್ತು ಅನುಶ್ರಿ ಎಂಬ ಎರಡು ಎಳೆಯ ಕಂದಮ್ಮಗಳು ಸಾವಿಗೀಡಾಗಿವೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗ್ತಿರೋ ಹಿನ್ನಲೆ ನಿರಂತರ ಮಳೆಗೆ ಮನೆ ಗೋಡೆ ಕುಸಿದು ಸಾವಿಗೀಡಾಗಿದ್ದಾರೆ. ಇಂದು‌ ನಸುಕಿನ ಜಾವ ಸುಮಾರು 3.30ಕ್ಕೆ ಈ ದುರ್ಘಟನೆ ನಡೆದಿದೆ. ಮನೆಯಲ್ಲಿ ಒಟ್ಟು 6 ಜನ ವಾಸವಾಗಿದ್ರು, ಮನೆ ಗೋಡೆಗಳು ಕುಸಿದ ಹಿನ್ನೆಲೆ ಮನೆಯಲ್ಲಿ ಮಲಗಿದ್ದ (House collapsed) ಆರು ಜನರ ಮೇಲೆ ಗೋಡೆಗಳು ಬಿದ್ದಿವೆ. ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವಿಗೀಡಾಗಿದ್ದಾರೆ (Died). ವಯೋವೃದ್ದೆ ಯಲ್ಲಮ್ಮ ಹಾಗೂ ಅವರ ಪುತ್ರ ಮುತ್ತು ಮತ್ತು  ಸೊಸೆ ಸುನೀತಾಗೆ ಗಂಭೀರ ಗಾಯವಾಗಿದೆ. ಸವಣೂರು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಡಿವೋರ್ಸ್ ಪೋಸ್ಟ್‌ಗೆ ಅಭಿಷೇಕ್ ಬಚ್ಚನ್ ಲೈಕ್ಸ್..! ಐಶ್ವರ್ಯಗೆ ವಿಚ್ಛೇಧನ ಕೊಡೋಕೆ ರೆಡಿಯಾದ್ರಾ ಅಭಿಷೇಕ್..?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more