ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹಾವೇರಿಯಲ್ಲಿ ನಿರಂತರ ಮಳೆ.. ಮೂವರು ಸಾವು, ಮೂವರಿಗೆ ಗಂಭೀರ ಗಾಯ

Published : Jul 19, 2024, 11:22 AM ISTUpdated : Jul 19, 2024, 11:23 AM IST

ಮನೆ‌ ಗೋಡೆ ಕುಸಿದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.


ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ (Rain) ಹಿನ್ನೆಲೆ ಮನೆ‌ ಗೋಡೆ ಕುಸಿದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಮಳೆಗೆ ಮೂವರು ಬಲಿಯಾಗಿದ್ದಾರೆ. ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಮೂವರು ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಸುಮಾರು 30 ವರ್ಷದ ಚೆನ್ನಮ್ಮ ಹಾಗೂ ಅಮೂಲ್ಯ ಮತ್ತು ಅನುಶ್ರಿ ಎಂಬ ಎರಡು ಎಳೆಯ ಕಂದಮ್ಮಗಳು ಸಾವಿಗೀಡಾಗಿವೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗ್ತಿರೋ ಹಿನ್ನಲೆ ನಿರಂತರ ಮಳೆಗೆ ಮನೆ ಗೋಡೆ ಕುಸಿದು ಸಾವಿಗೀಡಾಗಿದ್ದಾರೆ. ಇಂದು‌ ನಸುಕಿನ ಜಾವ ಸುಮಾರು 3.30ಕ್ಕೆ ಈ ದುರ್ಘಟನೆ ನಡೆದಿದೆ. ಮನೆಯಲ್ಲಿ ಒಟ್ಟು 6 ಜನ ವಾಸವಾಗಿದ್ರು, ಮನೆ ಗೋಡೆಗಳು ಕುಸಿದ ಹಿನ್ನೆಲೆ ಮನೆಯಲ್ಲಿ ಮಲಗಿದ್ದ (House collapsed) ಆರು ಜನರ ಮೇಲೆ ಗೋಡೆಗಳು ಬಿದ್ದಿವೆ. ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವಿಗೀಡಾಗಿದ್ದಾರೆ (Died). ವಯೋವೃದ್ದೆ ಯಲ್ಲಮ್ಮ ಹಾಗೂ ಅವರ ಪುತ್ರ ಮುತ್ತು ಮತ್ತು  ಸೊಸೆ ಸುನೀತಾಗೆ ಗಂಭೀರ ಗಾಯವಾಗಿದೆ. ಸವಣೂರು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಡಿವೋರ್ಸ್ ಪೋಸ್ಟ್‌ಗೆ ಅಭಿಷೇಕ್ ಬಚ್ಚನ್ ಲೈಕ್ಸ್..! ಐಶ್ವರ್ಯಗೆ ವಿಚ್ಛೇಧನ ಕೊಡೋಕೆ ರೆಡಿಯಾದ್ರಾ ಅಭಿಷೇಕ್..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more